23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

ಬೆಳ್ತಂಗಡಿ:ಗುರುವಾಯನಕೆರೆಯ ಕೆರೆ ಬಳಿ ಲಾರಿಯೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಫೆ 9 ರಂದು ಮುಂಜಾನೆ ನಡೆದಿದೆ.

ಗುರುವಾಯನಕೆರೆ ಕಾರ್ಕಳ ಹೆದ್ದಾರಿಯ ಕೆರೆಯ ಬಳಿ ಇರುವ ದೊಡ್ಡ ತಿರುವಿನಲ್ಲಿ ರಸ್ತೆ ಬದಿ ಇದ್ದ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬ ರಸ್ತೆಗೆ ಮುರಿದು ಬಿದ್ದ ಪರಿಣಾಮ ಕೆಲವು ತಾಸು ವಾಹನ ಸಂಚಾರಕ್ಕೆ ತಡೆಯುಂಟಾಯಿತು. ತಕ್ಷಣ ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದು ಅವರು ಬಂದು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಡಿಕ್ಕಿ ಹೊಡೆದ ಬಳಿಕ ಚಾಲಕ ಲಾರಿ‌ ಸಹಿತ ಪರಾರಿಯಾಗಿದ್ದಾನೆ. ಒಂದು ವೇಳೆ ಡಿಕ್ಕಿಯ ವೇಳೆ ಬೇರೆ ವಾಹನ ಸಂಚಾರಿಸುತಿದ್ದಲ್ಲಿ ಅಥವಾ ಸಾರ್ವಜನಿಕರು ನಡೆದುಕೊಂಡು
ಹೋಗುತಿದ್ದಲ್ಲಿ ದೊಡ್ಡ ಅನಾಹುತ ಸಂಭವಿಸುತಿತ್ತು ಅದೃಷ್ಟವಶಾತ್ ವಾಹನ ಹಾಗೂ ಜನ ಸಂಚಾರ ಇಲ್ಲದ ಕಾರಣ ದೊಡ್ಡ ಅಪಾಯ ತಪ್ಪಿದಂತಿದೆ. ವಿದ್ಯುತ್ ಕಂಬ ಹಾಕಲು ಮೆಸ್ಕಾಂ ಸಿಬ್ಬಂದಿಗಳು ಕ್ರಮ ಕೈಗೊಂಡಿದ್ದಾರೆ.

Related posts

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಸೋಣಂದೂರು: ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ನಕಲಿ ಚಿನ್ನದ ಹಾವಳಿ ತಡೆಗೆ ಶಾಸಕರಿಗೆ ಮನವಿ

Suddi Udaya

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.157 ಕೋಟಿ ವಾರ್ಷಿಕ ವ್ಯವಹಾರ, ರೂ.61.70ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 10.25 ಡಿವಿಡೆಂಟ್

Suddi Udaya

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!