23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

ಬೆಳ್ತಂಗಡಿ:ಗುರುವಾಯನಕೆರೆಯ ಕೆರೆ ಬಳಿ ಲಾರಿಯೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಫೆ 9 ರಂದು ಮುಂಜಾನೆ ನಡೆದಿದೆ.

ಗುರುವಾಯನಕೆರೆ ಕಾರ್ಕಳ ಹೆದ್ದಾರಿಯ ಕೆರೆಯ ಬಳಿ ಇರುವ ದೊಡ್ಡ ತಿರುವಿನಲ್ಲಿ ರಸ್ತೆ ಬದಿ ಇದ್ದ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬ ರಸ್ತೆಗೆ ಮುರಿದು ಬಿದ್ದ ಪರಿಣಾಮ ಕೆಲವು ತಾಸು ವಾಹನ ಸಂಚಾರಕ್ಕೆ ತಡೆಯುಂಟಾಯಿತು. ತಕ್ಷಣ ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದು ಅವರು ಬಂದು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಡಿಕ್ಕಿ ಹೊಡೆದ ಬಳಿಕ ಚಾಲಕ ಲಾರಿ‌ ಸಹಿತ ಪರಾರಿಯಾಗಿದ್ದಾನೆ. ಒಂದು ವೇಳೆ ಡಿಕ್ಕಿಯ ವೇಳೆ ಬೇರೆ ವಾಹನ ಸಂಚಾರಿಸುತಿದ್ದಲ್ಲಿ ಅಥವಾ ಸಾರ್ವಜನಿಕರು ನಡೆದುಕೊಂಡು
ಹೋಗುತಿದ್ದಲ್ಲಿ ದೊಡ್ಡ ಅನಾಹುತ ಸಂಭವಿಸುತಿತ್ತು ಅದೃಷ್ಟವಶಾತ್ ವಾಹನ ಹಾಗೂ ಜನ ಸಂಚಾರ ಇಲ್ಲದ ಕಾರಣ ದೊಡ್ಡ ಅಪಾಯ ತಪ್ಪಿದಂತಿದೆ. ವಿದ್ಯುತ್ ಕಂಬ ಹಾಕಲು ಮೆಸ್ಕಾಂ ಸಿಬ್ಬಂದಿಗಳು ಕ್ರಮ ಕೈಗೊಂಡಿದ್ದಾರೆ.

Related posts

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ – ಜೆಸಿಐ ಬೆಳ್ತಂಗಡಿ ಮಂಜುಶ್ರೀ ಚಾಂಪಿಯನ್

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ‘ಸರ್ವ ಧರ್ಮ ‘ ಪ್ರಾರ್ಥನೆ

Suddi Udaya

ಕಳಿಯ ಗ್ರಾ.ಪಂ.ನಲ್ಲಿ ಕಾವಲು ಸಮಿತಿ ಸಭೆ

Suddi Udaya

ಧರ್ಮಸ್ಥಳ: ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನಿಧನ

Suddi Udaya

ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ

Suddi Udaya
error: Content is protected !!