July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

ಬೆಳ್ತಂಗಡಿ:ಗುರುವಾಯನಕೆರೆಯ ಕೆರೆ ಬಳಿ ಲಾರಿಯೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಫೆ 9 ರಂದು ಮುಂಜಾನೆ ನಡೆದಿದೆ.

ಗುರುವಾಯನಕೆರೆ ಕಾರ್ಕಳ ಹೆದ್ದಾರಿಯ ಕೆರೆಯ ಬಳಿ ಇರುವ ದೊಡ್ಡ ತಿರುವಿನಲ್ಲಿ ರಸ್ತೆ ಬದಿ ಇದ್ದ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬ ರಸ್ತೆಗೆ ಮುರಿದು ಬಿದ್ದ ಪರಿಣಾಮ ಕೆಲವು ತಾಸು ವಾಹನ ಸಂಚಾರಕ್ಕೆ ತಡೆಯುಂಟಾಯಿತು. ತಕ್ಷಣ ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದು ಅವರು ಬಂದು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಡಿಕ್ಕಿ ಹೊಡೆದ ಬಳಿಕ ಚಾಲಕ ಲಾರಿ‌ ಸಹಿತ ಪರಾರಿಯಾಗಿದ್ದಾನೆ. ಒಂದು ವೇಳೆ ಡಿಕ್ಕಿಯ ವೇಳೆ ಬೇರೆ ವಾಹನ ಸಂಚಾರಿಸುತಿದ್ದಲ್ಲಿ ಅಥವಾ ಸಾರ್ವಜನಿಕರು ನಡೆದುಕೊಂಡು
ಹೋಗುತಿದ್ದಲ್ಲಿ ದೊಡ್ಡ ಅನಾಹುತ ಸಂಭವಿಸುತಿತ್ತು ಅದೃಷ್ಟವಶಾತ್ ವಾಹನ ಹಾಗೂ ಜನ ಸಂಚಾರ ಇಲ್ಲದ ಕಾರಣ ದೊಡ್ಡ ಅಪಾಯ ತಪ್ಪಿದಂತಿದೆ. ವಿದ್ಯುತ್ ಕಂಬ ಹಾಕಲು ಮೆಸ್ಕಾಂ ಸಿಬ್ಬಂದಿಗಳು ಕ್ರಮ ಕೈಗೊಂಡಿದ್ದಾರೆ.

Related posts

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

Suddi Udaya

ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ವೈಯಕ್ತಿಕ ಧನಸಹಾಯ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ಬಸದಿಯಲ್ಲಿ ನಮೋಕಾರ ಮಹಾಮಂತ್ರ ಪಠಣ

Suddi Udaya

ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya
error: Content is protected !!