July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

ಬೆಳ್ತಂಗಡಿ:ಗುರುವಾಯನಕೆರೆಯ ಕೆರೆ ಬಳಿ ಲಾರಿಯೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಫೆ 9 ರಂದು ಮುಂಜಾನೆ ನಡೆದಿದೆ.

ಗುರುವಾಯನಕೆರೆ ಕಾರ್ಕಳ ಹೆದ್ದಾರಿಯ ಕೆರೆಯ ಬಳಿ ಇರುವ ದೊಡ್ಡ ತಿರುವಿನಲ್ಲಿ ರಸ್ತೆ ಬದಿ ಇದ್ದ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬ ರಸ್ತೆಗೆ ಮುರಿದು ಬಿದ್ದ ಪರಿಣಾಮ ಕೆಲವು ತಾಸು ವಾಹನ ಸಂಚಾರಕ್ಕೆ ತಡೆಯುಂಟಾಯಿತು. ತಕ್ಷಣ ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದು ಅವರು ಬಂದು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಡಿಕ್ಕಿ ಹೊಡೆದ ಬಳಿಕ ಚಾಲಕ ಲಾರಿ‌ ಸಹಿತ ಪರಾರಿಯಾಗಿದ್ದಾನೆ. ಒಂದು ವೇಳೆ ಡಿಕ್ಕಿಯ ವೇಳೆ ಬೇರೆ ವಾಹನ ಸಂಚಾರಿಸುತಿದ್ದಲ್ಲಿ ಅಥವಾ ಸಾರ್ವಜನಿಕರು ನಡೆದುಕೊಂಡು
ಹೋಗುತಿದ್ದಲ್ಲಿ ದೊಡ್ಡ ಅನಾಹುತ ಸಂಭವಿಸುತಿತ್ತು ಅದೃಷ್ಟವಶಾತ್ ವಾಹನ ಹಾಗೂ ಜನ ಸಂಚಾರ ಇಲ್ಲದ ಕಾರಣ ದೊಡ್ಡ ಅಪಾಯ ತಪ್ಪಿದಂತಿದೆ. ವಿದ್ಯುತ್ ಕಂಬ ಹಾಕಲು ಮೆಸ್ಕಾಂ ಸಿಬ್ಬಂದಿಗಳು ಕ್ರಮ ಕೈಗೊಂಡಿದ್ದಾರೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ: ವಿ.ಪ. ಸದಸ್ಯ ಬಿ.ಕೆ. ಹರಿಪ್ರಸಾದ್ ರಿಗೆ ಆಹ್ವಾನ

Suddi Udaya

ನಾವರ: ಮನೆಯೊಳಗೆ ಅವಿತುಕೊಂಡಿದ್ದ ಕಾಳಿಂಗ ಸರ್ಪ, ಭಯಭೀತರಾದ ಕುಟುಂಬ: ಸ್ನೇಕ್ ಅಶೋಕ್ ಲಾಯಿಲರವರಿಂದ ಯಶಸ್ವಿ ಕಾರ್ಯಾಚರಣೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕೊಕ್ಕಡ ಅಮೃತ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ

Suddi Udaya

ರಜತ ಮಹೋತ್ಸವದ ಸಂಭ್ರಮದಲ್ಲಿ ವಾಮಂಜೂರಿನ ಎಸ್ ಡಿ ಎಂ ಸಮಗ್ರ ಶಾಲೆ: ಕಲೋತ್ಸವದ ವೇದಿಕೆಯಲ್ಲಿ ಮಿಂಚಿದ ವಿಶೇಷ ಮಕ್ಕಳು

Suddi Udaya

ನಾಲ್ಕೂರು: ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಕುರೆಲ್ಯ ನಿಧನ

Suddi Udaya
error: Content is protected !!