23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಬೈಕ್ ಗೆ ಕಾರು ಡಿಕ್ಕಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ : ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ಎಂಬಲ್ಲಿ ಬೈಕ್ ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ಫೆ.7ರಂದು ವರದಿಯಾಗಿದೆ.

ಧರ್ಮಸ್ಥಳ ನಿವಾಸಿ ಚೇತನ್ ಎನ್.(26ವ) ಎಂಬವರ ದೂರಿನಂತೆ, ಫೆ. 07 ರಂದು ರಾತ್ರಿ KA 70 E 9952 ನೇ ಮೋಟಾರು ಸೈಕಲ್ ನ್ನು(ಬೈಕ್) ಅದರ ಸವಾರ ಸುಂದರ ಬಂಗೇರಾ ಎಂಬವರು ಸವಾರಿ ಮಾಡಿಕೊಂಡು ಹೋಗುತ್ತಾ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ಎಂಬಲ್ಲಿಗೆ ತಲುಪುತ್ತಿದ್ದಂತೆ KA 13 B 4788 ನೇ ಕಾರನ್ನು, ಅದರ ಚಾಲಕ ಪ್ರಕಾಶ್(46) ಎಂಬವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು, ಮೋಟಾರು ಸೈಕಲ್ ಗೆ ಢಿಕ್ಕಿ ಹೊಡೆದ ಪರಿಣಾಮ, ಮೋಟಾರು ಸೈಕಲ್ ಸವಾರ ಸುಂದರ ಬಂಗೇರಾ ರವರು ಮೋಟಾರು ಸೈಕಲ್ ನೊಂದಿಗೆ ರಸ್ತೆಗೆ ಬಿದ್ದು ಗಾಯಗೊಂಡವರನ್ನು, ಚಿಕಿತ್ಸೆಗಾಗಿ ಮಂಗಳೂರು ತೇಜಸ್ವಿನಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 15/2024 ಕಲಂ: 279,338 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

Suddi Udaya

ಪೆರಿಂಜೆ ಮದರಸದಲ್ಲಿ ಇಶಲ್ ಮದೀನ ಕಾರ್ಯಕ್ರಮ

Suddi Udaya

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮುಂಡಾಜೆ ವಲಯದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ದೀಪದ ಬತ್ತಿ ತಯಾರಿ ತರಬೇತಿಯ ಸಮಾರೋಪ

Suddi Udaya
error: Content is protected !!