23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

ನಾಲ್ಕೂರು: ಇಲ್ಲಿಯ ಹುಂಬೆಜೆ ಪಲ್ಕೆಯಲ್ಲಿ ನಡೆಯುವ ವರ್ಷಂಪ್ರತಿ ಜರಗುವ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ದೈವಸ್ಥಾನ, ಬೋವಾಡಿಯಲ್ಲಿ ನಡೆಯುವ ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವವು ಫೆ.7 ಮತ್ತು 8ರಂದು ನಡೆಯಿತು.

ಫೆ.7ರಂದು ಬೆಳಿಗ್ಗೆ ಹುಂಬೆಜೆ ಪಲ್ಕೆಯಲ್ಲಿ ಸಾರಿ ಹಾಕುವುದು ಮತ್ತು ಕಬೆ ಮುಹೂರ್ತ, ಚೆಂಡು ಇತ್ಯಾದಿ, ಸಂಜೆ ನಾಲ್ಕೂರುಗುತ್ತು ಮನೆಯಿಂದ ಭಂಡಾರ ಹೊರಡುವುದು. ರಾತ್ರಿ ಹುಂಬೆಜೆಪಲ್ಕೆಯಲ್ಲಿ ಕಲಶ ಶುದ್ಧಿ, ಸಾರ್ವಜನಿಕ ಅನ್ನಸಂತರ್ಪಣೆ, ಮಹಮ್ಮಾಯಿ ಪ್ರತಿಷ್ಠೆ ಹಾಗೂ ಶ್ರೀ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ, ಕಲ್ಲುರ್ಟಿ, ಕಲ್ಕುಡ ದೈವಗಳ ನೇಮ ನಡೆಯಿತು.

ಫೆ.8ರಂದು ಸಂಜೆ ನಾಲ್ಕೂರುಗುತ್ತು ಮನೆಯಿಂದ ಭಂಡಾರ ಹೊರಟು. ಬೋವಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಪಂಚ ವರ್ಣ, ಸಾರ್ವಜನಿಕ ಅನ್ನಸಂತರ್ಪಣೆ, ಶ್ರೀ ಕೊಡಮಣಿತ್ತಾಯ, ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ ಜರುಗಿತು. ನೂರಾರು ಭಕ್ತರು ಭಾಗವಹಿಸಿದ್ದರು.

ನಿಟ್ಟಡ್ಕ ಜೋಗಿ ಪುರುಷರ ಬಳಗದಿಂದ ಕೊಡಮಣಿತ್ತಾಯ ದೈವಕ್ಕೆ ಬೆಳ್ಳಿಯ ಆಭರಣ ಸಮರ್ಪಣೆ ಮಾಡಲಾಯಿತು.

ಚಿತ್ರ: ನೇಸರ ಕಟ್ಟೆ

Related posts

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ದಕ್ಷಿಣ ಕನ್ನಡ: ಬೆಳ್ತಂಗಡಿ ಸೇರಿದಂತೆ 5 ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

Suddi Udaya

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

Suddi Udaya
error: Content is protected !!