22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

ನಾಲ್ಕೂರು: ಇಲ್ಲಿಯ ಹುಂಬೆಜೆ ಪಲ್ಕೆಯಲ್ಲಿ ನಡೆಯುವ ವರ್ಷಂಪ್ರತಿ ಜರಗುವ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ದೈವಸ್ಥಾನ, ಬೋವಾಡಿಯಲ್ಲಿ ನಡೆಯುವ ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವವು ಫೆ.7 ಮತ್ತು 8ರಂದು ನಡೆಯಿತು.

ಫೆ.7ರಂದು ಬೆಳಿಗ್ಗೆ ಹುಂಬೆಜೆ ಪಲ್ಕೆಯಲ್ಲಿ ಸಾರಿ ಹಾಕುವುದು ಮತ್ತು ಕಬೆ ಮುಹೂರ್ತ, ಚೆಂಡು ಇತ್ಯಾದಿ, ಸಂಜೆ ನಾಲ್ಕೂರುಗುತ್ತು ಮನೆಯಿಂದ ಭಂಡಾರ ಹೊರಡುವುದು. ರಾತ್ರಿ ಹುಂಬೆಜೆಪಲ್ಕೆಯಲ್ಲಿ ಕಲಶ ಶುದ್ಧಿ, ಸಾರ್ವಜನಿಕ ಅನ್ನಸಂತರ್ಪಣೆ, ಮಹಮ್ಮಾಯಿ ಪ್ರತಿಷ್ಠೆ ಹಾಗೂ ಶ್ರೀ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ, ಕಲ್ಲುರ್ಟಿ, ಕಲ್ಕುಡ ದೈವಗಳ ನೇಮ ನಡೆಯಿತು.

ಫೆ.8ರಂದು ಸಂಜೆ ನಾಲ್ಕೂರುಗುತ್ತು ಮನೆಯಿಂದ ಭಂಡಾರ ಹೊರಟು. ಬೋವಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಪಂಚ ವರ್ಣ, ಸಾರ್ವಜನಿಕ ಅನ್ನಸಂತರ್ಪಣೆ, ಶ್ರೀ ಕೊಡಮಣಿತ್ತಾಯ, ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ ಜರುಗಿತು. ನೂರಾರು ಭಕ್ತರು ಭಾಗವಹಿಸಿದ್ದರು.

ನಿಟ್ಟಡ್ಕ ಜೋಗಿ ಪುರುಷರ ಬಳಗದಿಂದ ಕೊಡಮಣಿತ್ತಾಯ ದೈವಕ್ಕೆ ಬೆಳ್ಳಿಯ ಆಭರಣ ಸಮರ್ಪಣೆ ಮಾಡಲಾಯಿತು.

ಚಿತ್ರ: ನೇಸರ ಕಟ್ಟೆ

Related posts

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಸನ್ಮಾನ

Suddi Udaya

ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ ನಿಧನ

Suddi Udaya

ಸೆ.16: ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya
error: Content is protected !!