25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

ಉಜಿರೆ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, ಬ್ಯಾಂಕ್ ಒಫ್ ಬರೋಡ ಉಜಿರೆ ಶಾಖೆ ಹಾಗೂ ಕರ್ನಾಟಕ ರಾಜ್ಯ ಟೈಲರ್ ಒಕ್ಕೂಟ ಉಜಿರೆ ವಲಯ ಇವರ ಸಹಕಾರದಲ್ಲಿ10 ದಿನಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್ )ತರಬೇತಿಯ ಸಮಾರೋಪ ಕಾರ್ಯಕ್ರಮ ಉಜಿರೆಯ ಚಿತ್ತಾರ ಟೈಲರಿಂಗ್ ಸಭಾಂಗಣದಲ್ಲಿ ನಡೆಯಿತು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರು ಇಲ್ಲಿಯ ಮುಖ್ಯ ಕಾರ್ಯನಿರ್ವಹನಾಧಿಕಾರಿ ಸಚಿನ್ ಹೆಗ್ಡೆರವರು ಯಶಸ್ವಿಯಾಗಿ ತರಬೇತಿ ಮುಗಿಸಿದ ಮಹಿಳೆಯರಿಗೆ ಅಭಿನಂದನೆ ಸಲ್ಲಿಸಿದರು. ತರಬೇತಿ ಪಡೆದ ಮಹಿಳೆಯರು ಬ್ಯಾಂಕ್ ಸೌಲಭ್ಯ ಹಾಗೂ ಸರ್ಕಾರದಿಂದ ಸಿಗುವ ಸವಲತ್ತು ಉಪಯೋಗಿಸಿ ಸ್ವಂತ ಉದ್ಯೋಗ ಕೈಗೊಳ್ಳಲು ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬ್ಯಾಂಕ್ ಒಫ್ ಬರೋಡ ಉಜಿರೆ ಶಾಖೆಯ ಮುಖ್ಯ ನಿಬಂಧಕಾರದ ಪ್ರಸಾದ್ ಬಿ. ಬ್ಯಾಂಕ್ ನಲ್ಲಿ ಸ್ವ ಉದ್ಯೋಗ ಮಾಡಲು ಮಹಿಳೆಯರಿಗೆ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಮಹಿಳೆಯರು ತರಬೇತಿ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ,ರಾಜ್ಯ ಟೈಲರ್ ಒಕ್ಕೂಟದ ಕ್ಷೇತ್ರ ಸಮಿತಿ ಅಧ್ಯಕ್ಷರಾದ ವೇದಾವತಿ ಜನಾರ್ಧನ್, ವಲಯ ಅಧ್ಯಕ್ಷರಾದ ರೂಪ ಜಗದೀಶ್, ವಲಯ ಕಾರ್ಯದರ್ಶಿ ಜೀನತ್, ಕ್ಷೇತ್ರ ಕಾರ್ಯದರ್ಶಿ ನಾಗೇಶ್, ತರಬೇತುದಾರರಾದ ಶ್ರೀಮತಿ ಸುಮನ ಉಪಸ್ಥಿತರಿದ್ದರು.

ಜಯ ಚಿದಾನಂದ್ ಕಾರ್ಯಕ್ರಮ ನಿರೂಪಣೆ ಮಾಡಿದರು.ಉಜಿರೆ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತ ಊರಿನ ಸುಮಾರು 28 ಮಹಿಳೆಯರು ಈ 10 ದಿವಸದ ತರಬೇತಿಯನ್ನು ಪಡೆದು ಪ್ರಮಾಣ ಪತ್ರ ಪಡೆದರು.

Related posts

ಹೊಸಂಗಡಿ ವಲಯದ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪದ್ಮುಂಜ: ಮಾ.1-6 : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ರಾಜ್ಯಮಟ್ಟದ ಪರೀಕ್ಷೆಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆಗೆ ಉಪ ಪ್ರಾಂಶುಪಾಲರಿಂದ ಮೆಚ್ಚುಗೆ

Suddi Udaya

ಬೆಳ್ತಂಗಡಿ: ಹುಟ್ಟೂರಲ್ಲಿ ಬಂಗೇರರ ವೃತ್ತ ಮತ್ತು ಪುತ್ಥಳಿ ನಿರ್ಮಾಣ: ಜಯವಿಕ್ರಮ್ ಕಲ್ಲಾಪು

Suddi Udaya

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

Suddi Udaya
error: Content is protected !!