23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

ಉಜಿರೆ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, ಬ್ಯಾಂಕ್ ಒಫ್ ಬರೋಡ ಉಜಿರೆ ಶಾಖೆ ಹಾಗೂ ಕರ್ನಾಟಕ ರಾಜ್ಯ ಟೈಲರ್ ಒಕ್ಕೂಟ ಉಜಿರೆ ವಲಯ ಇವರ ಸಹಕಾರದಲ್ಲಿ10 ದಿನಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್ )ತರಬೇತಿಯ ಸಮಾರೋಪ ಕಾರ್ಯಕ್ರಮ ಉಜಿರೆಯ ಚಿತ್ತಾರ ಟೈಲರಿಂಗ್ ಸಭಾಂಗಣದಲ್ಲಿ ನಡೆಯಿತು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರು ಇಲ್ಲಿಯ ಮುಖ್ಯ ಕಾರ್ಯನಿರ್ವಹನಾಧಿಕಾರಿ ಸಚಿನ್ ಹೆಗ್ಡೆರವರು ಯಶಸ್ವಿಯಾಗಿ ತರಬೇತಿ ಮುಗಿಸಿದ ಮಹಿಳೆಯರಿಗೆ ಅಭಿನಂದನೆ ಸಲ್ಲಿಸಿದರು. ತರಬೇತಿ ಪಡೆದ ಮಹಿಳೆಯರು ಬ್ಯಾಂಕ್ ಸೌಲಭ್ಯ ಹಾಗೂ ಸರ್ಕಾರದಿಂದ ಸಿಗುವ ಸವಲತ್ತು ಉಪಯೋಗಿಸಿ ಸ್ವಂತ ಉದ್ಯೋಗ ಕೈಗೊಳ್ಳಲು ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬ್ಯಾಂಕ್ ಒಫ್ ಬರೋಡ ಉಜಿರೆ ಶಾಖೆಯ ಮುಖ್ಯ ನಿಬಂಧಕಾರದ ಪ್ರಸಾದ್ ಬಿ. ಬ್ಯಾಂಕ್ ನಲ್ಲಿ ಸ್ವ ಉದ್ಯೋಗ ಮಾಡಲು ಮಹಿಳೆಯರಿಗೆ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಮಹಿಳೆಯರು ತರಬೇತಿ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ,ರಾಜ್ಯ ಟೈಲರ್ ಒಕ್ಕೂಟದ ಕ್ಷೇತ್ರ ಸಮಿತಿ ಅಧ್ಯಕ್ಷರಾದ ವೇದಾವತಿ ಜನಾರ್ಧನ್, ವಲಯ ಅಧ್ಯಕ್ಷರಾದ ರೂಪ ಜಗದೀಶ್, ವಲಯ ಕಾರ್ಯದರ್ಶಿ ಜೀನತ್, ಕ್ಷೇತ್ರ ಕಾರ್ಯದರ್ಶಿ ನಾಗೇಶ್, ತರಬೇತುದಾರರಾದ ಶ್ರೀಮತಿ ಸುಮನ ಉಪಸ್ಥಿತರಿದ್ದರು.

ಜಯ ಚಿದಾನಂದ್ ಕಾರ್ಯಕ್ರಮ ನಿರೂಪಣೆ ಮಾಡಿದರು.ಉಜಿರೆ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತ ಊರಿನ ಸುಮಾರು 28 ಮಹಿಳೆಯರು ಈ 10 ದಿವಸದ ತರಬೇತಿಯನ್ನು ಪಡೆದು ಪ್ರಮಾಣ ಪತ್ರ ಪಡೆದರು.

Related posts

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya

ಸುಲ್ಕೇರಿ: ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾ ಕಚೇರಿಯಲ್ಲಿ ನೀರು ಉಳಿಸಿ ಭವಿಷ್ಯದ ನೀರು-ಇಂದಿನ ಕಾಳಜಿ ಕರಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ರಾಜಕೀಯ ಪ್ರೇರಿತ ಷಡ್ಯಂತ್ರಕ್ಕೆ ಇನ್ನೊಂದು ಜೀವ ಬಲಿಯಾಗಿದೆ: ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!