22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಯೋನ್ ಆಶ್ರಮದ ಸ್ಥಾಪಕ ಡಾ. ಯು.ಸಿ. ಪೌಲೋಸ್‌ರಿಗೆ ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ಅಭಿನಂದನಾ ಸಮಾರಂಭ

ಬೆಳ್ತಂಗಡಿ: ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ಅಂತರಾಷ್ಟ್ರೀಯ ಸೀನಿಯರ್ ಛೇಂಬರ್‌ನ ರಾಷ್ಟ್ರದ ಜವಾಬ್ದಾರಿಯುತ ಹಾಗೂ ಕ್ರಿಯಾಶೀಲ ನಾಗರಿಕ ಪ್ರಶಸ್ತಿಗೆ ನಿಯೋಜಿಸಲ್ಪಟ್ಟ ಗಂಡಿಬಾಗಿಲಿನ ಸಿಯೋನ್ ಆಶ್ರಮದ ಸ್ಥಾಪಕ ಡಾ. ಯು.ಸಿ ಪೌಲೋಸ್‌ರವರನ್ನು ಅವರ ಆಶ್ರಮದಲ್ಲಿ ಸೀನಿಯರ್ ಛೇಂಬರ್‌ನ ಸದಸ್ಯರು ಫಲ ಪುಷ್ಪ ಹಾಗೂ ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಸೀನಿಯರ್ ಛೇಂಬರ್ ಅಧ್ಯಕ್ಷ ಪೃಥ್ವಿರಂಜನ್ ರಾವ್, ಸ್ಥಾಪಕಾಧ್ಯಕ್ಷ ಪ್ರಮೋದ್ ಆರ್. ನಾಯಕ್, ಪೂರ್ವಾಧ್ಯಕ್ಷ ಪಿ.ಪಿ. ಜೋಯ್, ಉಪಾಧ್ಯಕ್ಷ ಹರೀಶ್ ಶೆಟ್ಟಿ, ಮೋಲ್ಸಿ ಜೋಯ್, ಸಿಯೋನ್ ಆಶ್ರಮದ ನಿರ್ದೇಶಕ ಮೇರಿ ಯು.ಪಿ., ಶೋಭಾ ಯು.ಪಿ. ಹಾಗೂ ಆಶ್ರಮದ ಎಲ್ಲಾ ನಿವಾಸಿಗಳು, ಕಾರ್ಯಕರ್ತರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಆಶ್ರಮದ ಕಾರ್ಯಕ್ರಮಗಳಿಗೆ ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ರೂ.20 ಸಾವಿರ ಸಹಾಯಧನವನ್ನು ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರು ಹಸ್ತಾಂತರಿಸಿದರು.

Related posts

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿ.ಯು ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬಜಿಲ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಚಿರಶ್ರೀ, ಉಪಮುಖ್ಯಮಂತ್ರಿ ಶ್ರೇಯಾ ಆಯ್ಕೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯಿಂದ ಉದ್ಯಮದೊಂದಿಗೆ ಸಮಾಜಮುಖಿ ಸೇವೆ:

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತoಬಿಲ ಸೇವೆ

Suddi Udaya
error: Content is protected !!