July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

ಉಜಿರೆ : ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯ ಹಾಗೂ ಸಮೂಹ ಶಿಕ್ಷಣ ಸಂಸ್ಥೆಗಳ ಎ. ಶಾಮರಾವ್ ಫೌಂಡೇಷನ್ ವತಿಯಿಂದ ಕೊಡಲ್ಪಡುವ ಅಡ್ಕ “ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ ಪ್ರಶಸ್ತಿ:ಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಇವರು ಆಯ್ಕೆಯಾಗಿದ್ದಾರೆ.

ಇವರ ಶೈಕ್ಷಣಿಕ ಸಾಧನೆಗಳನ್ನು ಪರಿಗಣಿಸುವುದರೊಂದಿಗೆ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ಬೋಧನೆ , ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಂಸ್ಕೃತ ವಿದ್ಯಾರ್ಥಿವೇತನ ದೊರಕಿಸುವುದು ಹಾಗೇಯೇ ವಿವಿಧ ಪತ್ರಿಕೆಗಳಲ್ಲಿ ಲೇಖನಗಳ ಬರವಣಿಗೆ , ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪತ್ರಿಕೆಗಳಲ್ಲಿ ಸಂಶೋಧನ ಲೇಖನಗಳ ಪ್ರಕಟನೆ , ವಿಚಾರಸಂಕಿರಣ ಹಾಗೂ ವಿಚಾರಗೋಷ್ಠಿಗಳಲ್ಲಿ ಸಂಶೋಧನ ಪ್ರಬಂಧಗಳ ಮಂಡನೆ , ಹದಿನೇಳು ಪುಸ್ತಕಗಳ ಪ್ರಕಟಣೆ , ನಾಟಕ , ಯಕ್ಷಗಾನ , ಗಮಕ ಪ್ರವಚನ ಇತ್ಯಾದಿಗಳಲ್ಲಿ ತೊಡಗಿಸಿಕೊಳ್ಳುವಿಕೆ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಯಾಗಿ ಮಾಡಿದಂತಹ ಜನೋಪಯೋಗಿ ಕಾರ್ಯಗಳನ್ನು ಪರಿಗಣಿಸಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ .

ಕೋಟೇಶ್ವರದ ದಿ. ಕೃಷ್ಣ ಐತಾಳ್ ಹಾಗೂ ಜಯಲಕ್ಷ್ಮೀ ಐತಾಳ್ ಇವರ ಪುತ್ರರಾಗಿರುವ ಇವರು ಶಿಕ್ಷಣ ತಜ್ಞ ಹಾಗೂ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾನಿಲಯದ ಸ್ಥಾಪಕರಾದ ಅಡ್ಕ ಶಾಮರಾವ್ ಇವರ ಹೆಸರಿನಲ್ಲಿ ಫೆ.14 ರಂದು ನಡೆಯುವ ಸ್ಥಾಪಕ ದಿನಾಚರಣೆಯ ಕಾರ್ಯಕ್ರಮದ ಸಂದರ್ಭದಲ್ಲಿ ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ ಇವರು ಅವಿಭಜಿತ ದಕ್ಷಿಣಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Related posts

ಉಜಿರೆ : ಶ್ರೀ ಧ.ಮಂ. ಕಾಲೇಜಿನ ವಿದ್ಯಾರ್ಥಿಗಳಿಂದ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ “ಮತದಾನ ನಮ್ಮ ಹಕ್ಕು” ಬೀದಿ ನಾಟಕ ಪ್ರದರ್ಶನ

Suddi Udaya

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ನೂತನ ಮುಖ್ಯಮಂತ್ರಿ ಡಿಕೆಶಿ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕೆ ಹೊಸ ದಿಕ್ಕು ನೀಡಲಿದ್ದಾರೆ: ಅಭಿನಂದನ್ ಹರೀಶ್ ಕುಮಾರ್

Suddi Udaya

ನಡ: ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಉಡುಪಿ ಜಿಲ್ಲಾ ಸಮಾವೇಶ 2024 ಮತ್ತು 26ನೇ ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಜಾಗೃತಿ ಶಿಬಿರ

Suddi Udaya

ಧರ್ಮಸ್ಥಳ ಪ್ರಕರಣ‌ ಎಸ್.ಐ.ಟಿ ತನಿಖೆಗೆ ತಡೆ ಕೋರಿ ಹೈಕೋರ್ಟ್ ಗೆ ಮತ್ತೊಂದು ಅರ್ಜಿ, ಮನವಿ ತಿರಸ್ಕಾರ

Suddi Udaya
error: Content is protected !!