26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಯು ಫೆ.9ರಿಂದ 11ರವರೆಗೆ ಕಾಪು-ಉಪರಡ್ಕ ದೈವಸ್ಥಾನದಲ್ಲಿ ನಡೆಯಲಿರುವುದು.

ಫೆ.8ರಂದು ಬೆಳಿಗ್ಗೆ ಕಾಪು ಸ್ಥಾನದಲ್ಲಿ ಗಣಹೋಮ, ಫೆ.9ರಂದು ಬೆಳಿಗ್ಗೆ ತೋರಣ, ಭಂಡಾರ ಹಿಡಿಯುವುದು ಮತ್ತು ಬ್ರಹ್ಮರು, ಕುಮಾರ, ಬೊಳ್ಯ, ಪಾಲೇಶರಾಯ, ಪಾಳೆದುಳ್ಳಾಲ್ತಿ, ಮುಗೇರ ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಿತು.

ಫೆ.10ರಂದು ತೋರಣ ಮುಹೂರ್ತ, ಮಧ್ಯಾಹ್ನ ಮೆದಿನದಿಂದ ರುದ್ರ ಚಾಮುಂಡಿ ದೈವದ ಭಂಡಾರ ತರುವುದು, ಸಂಜೆ ಹೊಸ್ತೋಟದಿಂದ ಕೊಡಮಣಿತ್ತಾಯ ದೈವದ ಭಂಡಾರ ತರುವುದು, ಗುತ್ತುವಿನಿಂದ ಶಿರಾಡಿ ದೈವದ ಭಂಡಾರ ತರುವುದು. ರಾತ್ರಿ ಬ್ರಹ್ಮರು, ರುದ್ರಚಾಮುಂಡಿ, ಕಲ್ಕುಡ, ಪಂಜುರ್ಲಿ ಇತ್ಯಾದಿ ದೈವಗಳ ನೇಮೋತ್ಸವ ಜರುಗಲಿದೆ. ಫೆ.11ರಂದು ಕೊಡಮಣಿತ್ತಾಯ, ಶಿರಾಡಿ, ಬಚ್ಚನಾಯ್ಕ, ಗುಳಿಗ ಇತ್ಯಾದಿ ದೈವಗಳ ನೇಮೋತ್ಸವ ನಡೆಯಲಿರುವುದು. ಫೆ.12ರಂದು ಬೆಳಿಗ್ಗೆ ಶುದ್ಧ ಕಲಶ, ತಂಬಿಲ ನಡೆಯಲಿದೆ.

Related posts

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

Suddi Udaya

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾಗಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ.

Suddi Udaya

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

Suddi Udaya

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

Suddi Udaya

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya
error: Content is protected !!