23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ಜಾತ್ರಾ ಮಹೋತ್ಸವ

ಮಲೆಬೆಟ್ಟು: ಕೊಯ್ಯೂರು ಗ್ರಾಮದ ಬದಿನಡೆ ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಫೆ. 8ರಿಂದ ಪ್ರಾರಂಭಗೊಂಡು 11ರವರೆಗೆ ನಡೆಯಲಿದೆ.

ಫೆ. 8ರಂದು ದೇವತಾ ಪ್ರಾರ್ಥನೆ, ಶ್ರೀ ಗಣಯಾಗ, ತೋರಣ ಮುಹೂರ್ತ, ಶ್ರೀ ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ಪ್ರಸನ್ನ ಪೂಜೆ, ಅನ್ನಸಂತರ್ಪಣೆ, ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ಪ್ರಸನ್ನ ಪೂಜೆ, ರಾತ್ರಿ ಶ್ರೀ ಪಂಚದುರ್ಗಾ ಪರಮೇಶ್ವರಿ ಯಕ್ಷಗಾನ ಕಲಾಸಂಘ ಆದೂರು ಪೇರಾಲ್ ಮತ್ತು ಅತಿಥಿ ಕಲಾವಿದರಿಂದ ಯಕ್ಷಗಾನ ಸುಧನ್ವ ಮೋಕ್ಷ, ಶ್ರೀ ರಂಗಪೂಜೆ, ಶ್ರೀ ದೇವಿ ಉತ್ಸವ, ನಿತ್ಯ ಬಲಿ, ನಡೆಯಿತು.


ಇಂದು ಬೆಳಿಗ್ಗೆ ದೇವಿ ಉತ್ಸವ, ದರ್ಶನ ಬಲಿ, ಕಲಶಾಭಿಷೇಕ, ಪ್ರಸನ್ನ ಪೂಜೆ, ಅನ್ನಸಂತರ್ಪಣೆ, ರಾತ್ರಿ ಶ್ರೀ ವಿಠಲ ನಾಯಕ್ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ, ರಾತ್ರಿ 8.30ರಿಂದ ಶ್ರೀದೇವಿ ಉತ್ಸವ, ಭೂತಬಲಿ, ಶಯನೋತ್ಸವ, ಕವಾಟ ಬಂಧನ ನಡೆಯಲಿದೆ.

Related posts

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

Suddi Udaya

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

Suddi Udaya

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya

ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya
error: Content is protected !!