July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಯೋನ್ ಆಶ್ರಮದ ಸ್ಥಾಪಕ ಡಾ. ಯು.ಸಿ. ಪೌಲೋಸ್‌ರಿಗೆ ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ಅಭಿನಂದನಾ ಸಮಾರಂಭ

ಬೆಳ್ತಂಗಡಿ: ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ಅಂತರಾಷ್ಟ್ರೀಯ ಸೀನಿಯರ್ ಛೇಂಬರ್‌ನ ರಾಷ್ಟ್ರದ ಜವಾಬ್ದಾರಿಯುತ ಹಾಗೂ ಕ್ರಿಯಾಶೀಲ ನಾಗರಿಕ ಪ್ರಶಸ್ತಿಗೆ ನಿಯೋಜಿಸಲ್ಪಟ್ಟ ಗಂಡಿಬಾಗಿಲಿನ ಸಿಯೋನ್ ಆಶ್ರಮದ ಸ್ಥಾಪಕ ಡಾ. ಯು.ಸಿ ಪೌಲೋಸ್‌ರವರನ್ನು ಅವರ ಆಶ್ರಮದಲ್ಲಿ ಸೀನಿಯರ್ ಛೇಂಬರ್‌ನ ಸದಸ್ಯರು ಫಲ ಪುಷ್ಪ ಹಾಗೂ ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಸೀನಿಯರ್ ಛೇಂಬರ್ ಅಧ್ಯಕ್ಷ ಪೃಥ್ವಿರಂಜನ್ ರಾವ್, ಸ್ಥಾಪಕಾಧ್ಯಕ್ಷ ಪ್ರಮೋದ್ ಆರ್. ನಾಯಕ್, ಪೂರ್ವಾಧ್ಯಕ್ಷ ಪಿ.ಪಿ. ಜೋಯ್, ಉಪಾಧ್ಯಕ್ಷ ಹರೀಶ್ ಶೆಟ್ಟಿ, ಮೋಲ್ಸಿ ಜೋಯ್, ಸಿಯೋನ್ ಆಶ್ರಮದ ನಿರ್ದೇಶಕ ಮೇರಿ ಯು.ಪಿ., ಶೋಭಾ ಯು.ಪಿ. ಹಾಗೂ ಆಶ್ರಮದ ಎಲ್ಲಾ ನಿವಾಸಿಗಳು, ಕಾರ್ಯಕರ್ತರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಆಶ್ರಮದ ಕಾರ್ಯಕ್ರಮಗಳಿಗೆ ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ರೂ.20 ಸಾವಿರ ಸಹಾಯಧನವನ್ನು ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರು ಹಸ್ತಾಂತರಿಸಿದರು.

Related posts

ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚೋತ್ಸವ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮುಂದೂಡಿಕೆ

Suddi Udaya

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಶಿಶಿಲ: ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ: ನಿವೃತ್ತ ಕೆ.ಜಯ ಕೀರ್ತಿ ಜೈನ್ ರವರಿಗೆ ಸನ್ಮಾನ

Suddi Udaya

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya
error: Content is protected !!