September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

ಕೊಕ್ಕಡ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ನೆಲ್ಯಾಡಿ-ಕೊಕ್ಕಡ ರಸ್ತೆಯ ನೆಲ್ಯಾಡಿ ಪುತ್ಯೆ ಸಮೀಪ ಫೆ.9 ರಂದು ರಾತ್ರಿ ನಡೆದಿದೆ.


ನೆಲ್ಯಾಡಿ ಪಡ್ಡಡ್ಕ ನಿವಾಸಿ ಬೆನ್ನಿ, ಅರಸಿನಮಕ್ಕಿ ಸಮೀಪದ ಮುಂಡ್ರೇಲು ನಿವಾಸಿಗಳಾದ ಮಹೇಂದ್ರ ಹಾಗೂ ಮಂಜುನಾಥ ಎಂಬವರು ಗಾಯಗೊಂಡು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ರಿಂಗ್ ವರ್ಕ್ಸ್ ಕೆಲಸ ನಿರ್ವಹಿಸುತ್ತಿರುವ ಪಡ್ಡಡ್ಕ ನಿವಾಸಿ ಬೆನ್ನಿ ಅವರು ತನ್ನ ಬೈಕ್‌ನಲ್ಲಿ ಕೊಕ್ಕಡದಿಂದ ನೆಲ್ಯಾಡಿಗೆ ಬರುತ್ತಿದ್ದು ಮಹೇಂದ್ರ ಹಾಗೂ ಮಂಜುನಾಥ ಅವರು ನೆಲ್ಯಾಡಿಯಿಂದ ಕೊಕ್ಕಡ ಕಡೆಗೆ ತಮ್ಮ ಬೈಕ್‌ನಲ್ಲಿ ಹೋಗುತ್ತಿದ್ದು ಪುತ್ಯೆ ಸಮೀಪ ಮಾಯಿಲಕೋಟೆ ದೈವಸ್ಥಾನಕ್ಕೆ ತಿರುಗುವಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು ಕೊಕ್ಕಡ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆನ್ನಿ ಅವರು ಪುತ್ತೂರು ಪ್ರಗತಿ ಆಸ್ಪತ್ರೆಯಲ್ಲಿ ಹಾಗೂ ಇನ್ನಿಬ್ಬರು ಗಾಯಾಳುಗಳ ಪೈಕಿ ಒಬ್ಬರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಾಗೂ ಇನ್ನೊಬ್ಬರು ಮಂಗಳೂರು ಫಾದರ್ ಮುಲ್ಲರ್‍ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

Related posts

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್

Suddi Udaya

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ದಾಳಿ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಆಯ್ಕೆ

Suddi Udaya
error: Content is protected !!