23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

ಕೊಕ್ಕಡ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ನೆಲ್ಯಾಡಿ-ಕೊಕ್ಕಡ ರಸ್ತೆಯ ನೆಲ್ಯಾಡಿ ಪುತ್ಯೆ ಸಮೀಪ ಫೆ.9 ರಂದು ರಾತ್ರಿ ನಡೆದಿದೆ.


ನೆಲ್ಯಾಡಿ ಪಡ್ಡಡ್ಕ ನಿವಾಸಿ ಬೆನ್ನಿ, ಅರಸಿನಮಕ್ಕಿ ಸಮೀಪದ ಮುಂಡ್ರೇಲು ನಿವಾಸಿಗಳಾದ ಮಹೇಂದ್ರ ಹಾಗೂ ಮಂಜುನಾಥ ಎಂಬವರು ಗಾಯಗೊಂಡು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ರಿಂಗ್ ವರ್ಕ್ಸ್ ಕೆಲಸ ನಿರ್ವಹಿಸುತ್ತಿರುವ ಪಡ್ಡಡ್ಕ ನಿವಾಸಿ ಬೆನ್ನಿ ಅವರು ತನ್ನ ಬೈಕ್‌ನಲ್ಲಿ ಕೊಕ್ಕಡದಿಂದ ನೆಲ್ಯಾಡಿಗೆ ಬರುತ್ತಿದ್ದು ಮಹೇಂದ್ರ ಹಾಗೂ ಮಂಜುನಾಥ ಅವರು ನೆಲ್ಯಾಡಿಯಿಂದ ಕೊಕ್ಕಡ ಕಡೆಗೆ ತಮ್ಮ ಬೈಕ್‌ನಲ್ಲಿ ಹೋಗುತ್ತಿದ್ದು ಪುತ್ಯೆ ಸಮೀಪ ಮಾಯಿಲಕೋಟೆ ದೈವಸ್ಥಾನಕ್ಕೆ ತಿರುಗುವಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು ಕೊಕ್ಕಡ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆನ್ನಿ ಅವರು ಪುತ್ತೂರು ಪ್ರಗತಿ ಆಸ್ಪತ್ರೆಯಲ್ಲಿ ಹಾಗೂ ಇನ್ನಿಬ್ಬರು ಗಾಯಾಳುಗಳ ಪೈಕಿ ಒಬ್ಬರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಾಗೂ ಇನ್ನೊಬ್ಬರು ಮಂಗಳೂರು ಫಾದರ್ ಮುಲ್ಲರ್‍ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

Related posts

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ

Suddi Udaya

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ನಾರಾವಿ ವಲಯದ ದೇಜಮ್ಮರಿಗೆ ವೀಲ್ ಚೇರ್ ವಿತರಣೆ

Suddi Udaya

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

Suddi Udaya

ಶಿಬಾಜೆ ಹರೀಶ್ ಮುಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ: ಎಸ್.ಪಿ ಸ್ಪಷ್ಟನೆ

Suddi Udaya
error: Content is protected !!