ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

ಬೆಳ್ತಂಗಡಿ: ಕರ್ನಾಟಕದ ಪ್ರಥಮ ಸೀರೋ ಮಲಬಾರ್ ಧರ್ಮಪ್ರಾಂತ್ಯವಾದ ಬೆಳ್ತಂಗಡಿ ಧರ್ಮಪ್ರಾಂತ್ಯವು ಫೆ.11 ರಂದು ಅದರ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾಗಿ ಪರಮ್ಮ ಪೂಜ್ಯ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಧರ್ಮಪ್ರಾಂತ್ಯದ ಪಿ.ಆರ್. ಓ. ಫಾ| ಟೋಮಿ ಕ್ಯಾಲಿಕಾಟ್ ಹೇಳಿದರು.

ಅವರು ಫೆ.10 ರಂದು ಜ್ಞಾನ ನಿಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಕಾರ್ಯಕ್ರಮದಲ್ಲಿ ಅಸಹಾಯಕ ಕುಟುಂಬಗಳಿಗೆ ನಿರ್ಮಿಸಲಾದ 25 ಮನೆಗಳ ಕೀಲಿ ಕೈ ಯನ್ನು ಹಸ್ತಾಂತರಿಸಲಾಗುವುದು. ಅಸಹಾಯಕ ಮಕ್ಕಳಿಗಾಗಿ ವಿದ್ಯಾನಿಧಿ ಕಾರ್ಯಕ್ರಮದ ಚಾಲನೆ ನಡೆಯಲಿದೆ. ಗಣ್ಯರನ್ನು ಮುಖ್ಯದ್ವಾರದಿಂದ ಸ್ವಾಗತಿಸಲಾಗುವುದು. ವಾಹನ ಪಾರ್ಕಿಂಗ್ ನ ವ್ಯವಸ್ಥೆಯನ್ನು ತಾಲೂಕು ಕ್ರೀಡಾಂಗಣದಲ್ಲಿ ಮಾಡಲಾಗಿದ್ದು, ಬಂದಂತಹ ಸರ್ವರಿಗೂ ಸಸ್ಯಾಹಾರ ಹಾಗೂ ಮಾಂಸಹಾರದ ವ್ಯವಸ್ಥೆಗಳಿವೆ. ಎಲ್ಲಾ ಸುಸಜ್ಜಿತ ವ್ಯವಸ್ಥೆಯನ್ನು ನಾಳೆ ಕಾರ್ಯರೂಪಕ್ಕೆ ತರಲಿದ್ದೇವೆ ಎಂದರು.

ನಿರ್ದೇಶಕ ಫಾ| ಮ್ಯಾಥ್ಯೂ ಕ್ಯಾಲಿಕಟ್ ಮಾತನಾಡಿ ಸಂಸದರು, ಶಾಸಕರು, ಆರಕ್ಷಕ ಇಲಾಖೆ ಸಹಕರಿಸುತ್ತೇವೆ ಎಂದಿದ್ದಾರೆ. ಪತ್ರಿಕಾ ಮಾಧ್ಯಮ, ದೃಶ್ಯ ಮಾಧ್ಯಮ ಹಾಗೂ ಎಲ್ಲರೂ ಸಹಕರಿಸಬೇಕೆಂದು ಕೇಳಿಕೊಂಡರು.

Related posts

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Suddi Udaya

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ

Suddi Udaya

ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ

Suddi Udaya
error: Content is protected !!