23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಫೆ.18: ಕೊಕ್ಕಡ ಕೇಸರಿ ಗೆಳೆಯರ ಬಳಗದ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ ಹಾಗೂ ಅಯೋಧ್ಯ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ

ಕೊಕ್ಕಡ: ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಆಶ್ರಯದಲ್ಲಿ ಹಿಂದೂ ಭಾಂದವರ ಅಯೋಧ್ಯ ಟ್ರೋಫಿ -2024 8 ಜನರ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಶ್ರೀ ರಾಮ ಜನ್ಮ ಭೂಮಿ ಅಯೋಧ್ಯ ಹೋರಾಟದ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ ಫೆ.18 ರಂದು ಕೊಕ್ಕಡ ಕೋರಿ ಗದ್ದೆ ಮೈದಾನದಲ್ಲಿ ನಡೆಯಲಿದೆ.

ಬೆಳಿಗ್ಗೆ ಉದ್ಘಾಟನೆಯನ್ನು ಈಶ್ವರ್ ಭಟ್ ಹಿತ್ತಿಲು, ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಿಕಟಪೂರ್ವಾಧ್ಯಕ್ಷರು ವೇದಮೂರ್ತಿ ಬಾಲಕೃಷ್ಣ ಕೆದಿಲಾಯ ವಹಿಸಲಿದ್ದಾರೆ.

ಮುಖ್ಯಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ರಾಜ್ಯ ಬಿಜೆಪಿ ಕಾರ್ಯದರ್ಶಿ ಬ್ರಿಜೇಶ್ ಚೌಟ, ಕೊಕ್ಕಡ ಗ್ರಾ.,ಪಂ. ಅಧ್ಯಕ್ಷೆ ಬೇಬಿ ಶಬರಾಡಿ, ಹಾಗೂ ಪ್ರಮುಖರು ಭಾಗವಹಿಸಲಿದ್ದಾರೆ.

ಸಂಜೆ ನಡೆಯುವ ಸಮಾರೋಪ ಸಮಾರಂಭದ ಮುಖ್ಯಅತಿಥಿಗಳಾಗಿ ಸೌತಡ್ಕ ಕ್ಷೇತ್ರದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ, ಹಾಗೂ ವಿವಿಧ ಸಂಘ ಸಂಸ್ಥೆಯ ಗಣ್ಯರು ಭಾಗವಹಿಸಲಿದ್ದಾರೆ.

ಬಹುಮಾನಗಳು: ಪ್ರಥಮ ರೂ. 8024 ಮತ್ತು ಟ್ರೋಫಿ, ದ್ವಿತೀಯ ರೂ. 5024 ಮತ್ತು ಟ್ರೋಪಿ, ತೃತೀಯ ರೂ. 3024 ಮತ್ತು ಟ್ರೋಫಿ, ಚತುರ್ಥ ರೂ. 2024 ಮತ್ತು ಟ್ರೋಫಿ , ಹಾಗೂ ಉತ್ತಮ ಬೌಲರ್, ಉತ್ತಮ ಬ್ಯಾಟ್ಸ್ ಮೆನ್, ಸರಣಿ ಶ್ರೇಷ್ಠ ಪ್ರಶಸ್ತಿ ಸಿಗಲಿದೆ.

Related posts

ಕೊಕ್ಕಡ: ಡಾ.ಬಿ ಮೋಹನ್ ದಾಸ್ ಗೌಡ ರವರ 90ನೇ ವರ್ಷದ ನವತಿ ಕಾರ್ಯಕ್ರಮ

Suddi Udaya

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!