23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಫೆ.18: ಕೊಕ್ಕಡ ಕೇಸರಿ ಗೆಳೆಯರ ಬಳಗದ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ ಹಾಗೂ ಅಯೋಧ್ಯ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ

ಕೊಕ್ಕಡ: ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಆಶ್ರಯದಲ್ಲಿ ಹಿಂದೂ ಭಾಂದವರ ಅಯೋಧ್ಯ ಟ್ರೋಫಿ -2024 8 ಜನರ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಶ್ರೀ ರಾಮ ಜನ್ಮ ಭೂಮಿ ಅಯೋಧ್ಯ ಹೋರಾಟದ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ ಫೆ.18 ರಂದು ಕೊಕ್ಕಡ ಕೋರಿ ಗದ್ದೆ ಮೈದಾನದಲ್ಲಿ ನಡೆಯಲಿದೆ.

ಬೆಳಿಗ್ಗೆ ಉದ್ಘಾಟನೆಯನ್ನು ಈಶ್ವರ್ ಭಟ್ ಹಿತ್ತಿಲು, ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಿಕಟಪೂರ್ವಾಧ್ಯಕ್ಷರು ವೇದಮೂರ್ತಿ ಬಾಲಕೃಷ್ಣ ಕೆದಿಲಾಯ ವಹಿಸಲಿದ್ದಾರೆ.

ಮುಖ್ಯಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ರಾಜ್ಯ ಬಿಜೆಪಿ ಕಾರ್ಯದರ್ಶಿ ಬ್ರಿಜೇಶ್ ಚೌಟ, ಕೊಕ್ಕಡ ಗ್ರಾ.,ಪಂ. ಅಧ್ಯಕ್ಷೆ ಬೇಬಿ ಶಬರಾಡಿ, ಹಾಗೂ ಪ್ರಮುಖರು ಭಾಗವಹಿಸಲಿದ್ದಾರೆ.

ಸಂಜೆ ನಡೆಯುವ ಸಮಾರೋಪ ಸಮಾರಂಭದ ಮುಖ್ಯಅತಿಥಿಗಳಾಗಿ ಸೌತಡ್ಕ ಕ್ಷೇತ್ರದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ, ಹಾಗೂ ವಿವಿಧ ಸಂಘ ಸಂಸ್ಥೆಯ ಗಣ್ಯರು ಭಾಗವಹಿಸಲಿದ್ದಾರೆ.

ಬಹುಮಾನಗಳು: ಪ್ರಥಮ ರೂ. 8024 ಮತ್ತು ಟ್ರೋಫಿ, ದ್ವಿತೀಯ ರೂ. 5024 ಮತ್ತು ಟ್ರೋಪಿ, ತೃತೀಯ ರೂ. 3024 ಮತ್ತು ಟ್ರೋಫಿ, ಚತುರ್ಥ ರೂ. 2024 ಮತ್ತು ಟ್ರೋಫಿ , ಹಾಗೂ ಉತ್ತಮ ಬೌಲರ್, ಉತ್ತಮ ಬ್ಯಾಟ್ಸ್ ಮೆನ್, ಸರಣಿ ಶ್ರೇಷ್ಠ ಪ್ರಶಸ್ತಿ ಸಿಗಲಿದೆ.

Related posts

ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್‌ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್‍ಸ್ ಶುಭಾರಂಭ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 137.95 ಕೋಟಿ ವ್ಯವಹಾರ, ರೂ. 53.26 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 9.50 ಡಿವಿಡೆಂಟ್

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೇತೃತ್ವದಲ್ಲಿ ‘ಚಿಣ್ಣರ ಲೋಕ’ ಶಿಬಿರ ಸಮಾರೋಪ

Suddi Udaya

ಜ.14-23: ಸಾವಿರ ವರ್ಷಗಳ ಇತಿಹಾಸವಿರುವ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ-ಮಹಾರಥೋತ್ಸವ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

Suddi Udaya

ನಾರಾವಿ ಉ.ಪ್ರಾಥಮಿಕ ಶಾಲೆ: ಪುಸ್ತಕ ವಿತರಣೆ

Suddi Udaya
error: Content is protected !!