22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

ಬಂಗಾಡಿ: ಬಂಗಾಡಿ-ಕೊಲ್ಲಿ ವಿದ್ಯುತ್ ಲೈನ್‌ನಲ್ಲಿ ಕಳೆದ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಗ್ರಾಹಕರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ಬೆಳ್ತಂಗಡಿ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ತಿಳಿಸಿದ್ದಾರೆ.

ಬಂಗಾಡಿ-ಕೊಲ್ಲಿ ವಿದ್ಯುತ್ ಫೀಡರ್‌ನಲ್ಲಿ ಬಹಳಷ್ಟು ಸಮಸ್ಯೆಗಳಿವೆ. ಇಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಲ್ಲಿ ಆಗಾಗ ಸಮಸ್ಯೆಗಳು ಕಾಡುತ್ತಿದೆ. ಕಳೆದ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲ, ಜೊತೆಗೆ ಆಗಾಗ ವಿದ್ಯುತ್ ಕೈಗೊಡುತ್ತಿದೆ. 3 ಫೇಸ್ ವಿದ್ಯುತ್ ಇಲ್ಲದಿರುವುದರಿಂದ ಪಂಪು ಚಾಲನೆಯಾಗದೆ ಕೃಷಿಕರಿಗೆ ಬಹಳಷ್ಟು ಸಮಸ್ಯೆಯಾಗಿದೆ. ಕಳೆದ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲ, ಕೃಷಿ ತೋಟಗಳಿಗೆ ಹಾಗೂ ಕುಡಿಯುವ ನೀರಿಗೂ ಸಮಸ್ಯೆಯಾಗಿದೆ. ಈ ಬಗ್ಗೆ ಮೇಲಾಧಿಕಾರಿಗಳಿಗೆ ಎಂಎಲ್‌ಸಿ ಹರೀಶ್ ಕುಮಾರ್ ಅವರಿಗೆ ದೂರು ನೀಡದ ನಂತರ ಸ್ವಲ್ಪ ಹೊತ್ತು 3 ಫೇಸ್ ವಿದ್ಯುತ್ ಬಂತು. ನಂತರ ಕೈಕೊಟ್ಟಿದೆ. ಇದರ ಬಗ್ಗೆ ಮೆಸ್ಕಾಂ ಇಲಾಖೆಯವರ ಗಮನಕ್ಕೆ ತಂದರೆ ಅವರು ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಸಂಬಂಧಪಟ್ಟವರು ಇದರ ಬಗ್ಗೆ ಕೂಡಲೇ ಸೂಕ್ತ ಕ್ರಮ ಕೈಗೊಂಡು ಬಂಗಾಡಿ-ಕೊಲ್ಲಿ ವಿದ್ಯುತ್ ಲೈನ್‌ಗೆ 3 ಫೇಸ್ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಮುಕುಂದ ಸುವರ್ಣ ಅವರು ಆಗ್ರಹಿಸಿದ್ದಾರೆ.

Related posts

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಬಂಟ್ವಾಳದಲ್ಲಿ ಪತ್ತೆ

Suddi Udaya

ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠ್ಠಲ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya

ಬುರುಡೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾದ ಪ್ರದೀಪ್ : ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್.ಐ.ಟಿ

Suddi Udaya
error: Content is protected !!