September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ‘ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು’ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿವಾದಾತ್ಮಕ ಪೋಸ್ಟ್ ಹಾಕಿದ್ದು, ಇದು ರಾಜ್ಯಾದ್ಯಂತ ಭಾರೀ ಚರ್ಚೆಯನ್ನೇ ಹುಟ್ಟು ಹಾಕುತ್ತಿದೆ.

ಶಾಸಕ ಹರೀಶ್ ಪೂಂಜ ಅವರು ಫೇಸ್‌ಬುಕ್‌ನಲ್ಲಿ ‘ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು. ಈ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಸಲ್ಲಿಕೆಯಾಗಬೇಕು. ಹಿಂದೂಗಳು ಕಟ್ಟಿದ ತೆರಿಗೆ ಹಣ ಇತರ ಧರ್ಮದ ಜನರಿಗೆ ಸೇರುವುದು ಅನ್ಯಾಯ’ ಎಂದು ಪೋಸ್ಟ್ ಹಾಕಿದ್ದರು. ಇದು ಸಾಮಾಜಿಕ ಜಾಲತಾಣ, ರಾಜಕೀಯ ವಲಯದಲ್ಲಿ ಹೊಸ ವಿವಾದ ಹುಟ್ಟು ಹಾಕಿದೆ.


ವಿವಾದಕ್ಕೆ ಸಂಬಂಧಿಸಿ ಮಾಧ್ಯಮದ ಜತೆ ಮಾತನಾಡಿದ ಶಾಸಕ ಹರೀಶ್ ಪೂಂಜ ಅವರು, ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, “ಸಂಸದ ಡಿ.ಕೆ. ಸುರೇಶ್ ಕುಮಾರ್ ಅವರ ದೇಶ ವಿಭಜನೆ ಹೇಳಿಕೆಗೆ ಸಾಮಾನ್ಯ ರೀತಿ ಖಂಡನೆ ಮಾಡಿದರೆ ಅವರಿಗೆ ಅರ್ಥ ಆಗಲ್ಲ. ಅದಕ್ಕಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದೇನೆ. ಹಿಂದೂಗಳ ತೆರಿಗೆಯನ್ನು ಹಿಂದೂಗಳಿಗೆ ಅಭಿವೃದ್ಧಿ ಮಾಡಿ ಅಂತಾ ಕೇಳುವುದರಲ್ಲಿ ತಪ್ಪೇನಿದೆ ?,” ಎಂದು ಹೇಳಿದರು.
ಕಾಂಗ್ರೆಸ್‌ನವರು ಉತ್ತರ-ದಕ್ಷಿಣ ಭಾರತ ಅಂತಾ ವಿಭಜನೆ ಮಾಡುತ್ತಿದ್ದಾರೆ. ಹಾಗಿರುವಾಗ ಹಿಂದೂಗಳ ತೆರಿಗೆಯನ್ನು ಲೆಕ್ಕ ಹಾಕೋಕೆ ಕಷ್ಟವೇ ? ಪ್ರತಿಯೊಬ್ಬನ ಹೆಸರಿನ ಮುಂದೆ ಅವನ ಧರ್ಮವೂ ಉಲ್ಲೇಖವಾಗಿರುತ್ತದೆ. ಸಿಂಗಲ್ ಟ್ಯಾಪ್‌ನಲ್ಲಿ ತೆರಿಗೆಯನ್ನು ವಿಭಾಗಿಸಬಹುದಾಗಿದೆ,” ಎಂದು ಹೇಳಿಕೆ ನೀಡಿದ್ದಾರೆ.

Related posts

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ನಾವೂರು ಮತ್ತು ಕುತ್ಲೂರು ಗ್ರಾಮಗಳ ವಿದ್ಯುತ್ ಸಂಪರ್ಕಕ್ಕಾಗಿ ವನ್ಯಜೀವಿ ಮಂಡಳಿ ಅನುಮೋದನೆ: ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಅಧ್ಯಕ್ಷ ಶೇಖರ್ ಎಲ್.ಹೇಳಿಕೆ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

Suddi Udaya

ಹೊಸ ಬೆಳಕು ಒಕ್ಕೂಟ ಹಾಗೂ ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿ

Suddi Udaya

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

Suddi Udaya
error: Content is protected !!