April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

ಬೆಳ್ತಂಗಡಿ: ಕರ್ನಾಟಕದ ಪ್ರಥಮ ಸೀರೋ ಮಲಬಾರ್ ಧರ್ಮಪ್ರಾಂತ್ಯವಾದ ಬೆಳ್ತಂಗಡಿ ಧರ್ಮಪ್ರಾಂತ್ಯವು ಫೆ.11 ರಂದು ಅದರ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾಗಿ ಪರಮ್ಮ ಪೂಜ್ಯ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಧರ್ಮಪ್ರಾಂತ್ಯದ ಪಿ.ಆರ್. ಓ. ಫಾ| ಟೋಮಿ ಕ್ಯಾಲಿಕಾಟ್ ಹೇಳಿದರು.

ಅವರು ಫೆ.10 ರಂದು ಜ್ಞಾನ ನಿಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಕಾರ್ಯಕ್ರಮದಲ್ಲಿ ಅಸಹಾಯಕ ಕುಟುಂಬಗಳಿಗೆ ನಿರ್ಮಿಸಲಾದ 25 ಮನೆಗಳ ಕೀಲಿ ಕೈ ಯನ್ನು ಹಸ್ತಾಂತರಿಸಲಾಗುವುದು. ಅಸಹಾಯಕ ಮಕ್ಕಳಿಗಾಗಿ ವಿದ್ಯಾನಿಧಿ ಕಾರ್ಯಕ್ರಮದ ಚಾಲನೆ ನಡೆಯಲಿದೆ. ಗಣ್ಯರನ್ನು ಮುಖ್ಯದ್ವಾರದಿಂದ ಸ್ವಾಗತಿಸಲಾಗುವುದು. ವಾಹನ ಪಾರ್ಕಿಂಗ್ ನ ವ್ಯವಸ್ಥೆಯನ್ನು ತಾಲೂಕು ಕ್ರೀಡಾಂಗಣದಲ್ಲಿ ಮಾಡಲಾಗಿದ್ದು, ಬಂದಂತಹ ಸರ್ವರಿಗೂ ಸಸ್ಯಾಹಾರ ಹಾಗೂ ಮಾಂಸಹಾರದ ವ್ಯವಸ್ಥೆಗಳಿವೆ. ಎಲ್ಲಾ ಸುಸಜ್ಜಿತ ವ್ಯವಸ್ಥೆಯನ್ನು ನಾಳೆ ಕಾರ್ಯರೂಪಕ್ಕೆ ತರಲಿದ್ದೇವೆ ಎಂದರು.

ನಿರ್ದೇಶಕ ಫಾ| ಮ್ಯಾಥ್ಯೂ ಕ್ಯಾಲಿಕಟ್ ಮಾತನಾಡಿ ಸಂಸದರು, ಶಾಸಕರು, ಆರಕ್ಷಕ ಇಲಾಖೆ ಸಹಕರಿಸುತ್ತೇವೆ ಎಂದಿದ್ದಾರೆ. ಪತ್ರಿಕಾ ಮಾಧ್ಯಮ, ದೃಶ್ಯ ಮಾಧ್ಯಮ ಹಾಗೂ ಎಲ್ಲರೂ ಸಹಕರಿಸಬೇಕೆಂದು ಕೇಳಿಕೊಂಡರು.

Related posts

ಗೋಕರ್ಣನಾಥ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆ: ಯುವವಾಹಿನಿ ಕೇಂದ್ರ ಸಮಿತಿ ನಿಕಟಪೂರ್ವಾಧ್ಯಕ್ಷ ಬಳಂಜ ಬೈಲಬರಿ ಹರೀಶ್ ಕೆ ಪೂಜಾರಿಯವರಿಗೆ ಗೆಲುವು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya
error: Content is protected !!