July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

ಬೆಳ್ತಂಗಡಿ: ಕರ್ನಾಟಕದ ಪ್ರಥಮ ಸೀರೋ ಮಲಬಾರ್ ಧರ್ಮಪ್ರಾಂತ್ಯವಾದ ಬೆಳ್ತಂಗಡಿ ಧರ್ಮಪ್ರಾಂತ್ಯವು ಫೆ.11 ರಂದು ಅದರ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾಗಿ ಪರಮ್ಮ ಪೂಜ್ಯ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಧರ್ಮಪ್ರಾಂತ್ಯದ ಪಿ.ಆರ್. ಓ. ಫಾ| ಟೋಮಿ ಕ್ಯಾಲಿಕಾಟ್ ಹೇಳಿದರು.

ಅವರು ಫೆ.10 ರಂದು ಜ್ಞಾನ ನಿಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಕಾರ್ಯಕ್ರಮದಲ್ಲಿ ಅಸಹಾಯಕ ಕುಟುಂಬಗಳಿಗೆ ನಿರ್ಮಿಸಲಾದ 25 ಮನೆಗಳ ಕೀಲಿ ಕೈ ಯನ್ನು ಹಸ್ತಾಂತರಿಸಲಾಗುವುದು. ಅಸಹಾಯಕ ಮಕ್ಕಳಿಗಾಗಿ ವಿದ್ಯಾನಿಧಿ ಕಾರ್ಯಕ್ರಮದ ಚಾಲನೆ ನಡೆಯಲಿದೆ. ಗಣ್ಯರನ್ನು ಮುಖ್ಯದ್ವಾರದಿಂದ ಸ್ವಾಗತಿಸಲಾಗುವುದು. ವಾಹನ ಪಾರ್ಕಿಂಗ್ ನ ವ್ಯವಸ್ಥೆಯನ್ನು ತಾಲೂಕು ಕ್ರೀಡಾಂಗಣದಲ್ಲಿ ಮಾಡಲಾಗಿದ್ದು, ಬಂದಂತಹ ಸರ್ವರಿಗೂ ಸಸ್ಯಾಹಾರ ಹಾಗೂ ಮಾಂಸಹಾರದ ವ್ಯವಸ್ಥೆಗಳಿವೆ. ಎಲ್ಲಾ ಸುಸಜ್ಜಿತ ವ್ಯವಸ್ಥೆಯನ್ನು ನಾಳೆ ಕಾರ್ಯರೂಪಕ್ಕೆ ತರಲಿದ್ದೇವೆ ಎಂದರು.

ನಿರ್ದೇಶಕ ಫಾ| ಮ್ಯಾಥ್ಯೂ ಕ್ಯಾಲಿಕಟ್ ಮಾತನಾಡಿ ಸಂಸದರು, ಶಾಸಕರು, ಆರಕ್ಷಕ ಇಲಾಖೆ ಸಹಕರಿಸುತ್ತೇವೆ ಎಂದಿದ್ದಾರೆ. ಪತ್ರಿಕಾ ಮಾಧ್ಯಮ, ದೃಶ್ಯ ಮಾಧ್ಯಮ ಹಾಗೂ ಎಲ್ಲರೂ ಸಹಕರಿಸಬೇಕೆಂದು ಕೇಳಿಕೊಂಡರು.

Related posts

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

Suddi Udaya

ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

Suddi Udaya

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya
error: Content is protected !!