July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

ಬೆಳ್ತಂಗಡಿ: ಕರ್ನಾಟಕದ ಪ್ರಥಮ ಸೀರೋ ಮಲಬಾರ್ ಧರ್ಮಪ್ರಾಂತ್ಯವಾದ ಬೆಳ್ತಂಗಡಿ ಧರ್ಮಪ್ರಾಂತ್ಯವು ಫೆ.11 ರಂದು ಅದರ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾಗಿ ಪರಮ್ಮ ಪೂಜ್ಯ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಧರ್ಮಪ್ರಾಂತ್ಯದ ಪಿ.ಆರ್. ಓ. ಫಾ| ಟೋಮಿ ಕ್ಯಾಲಿಕಾಟ್ ಹೇಳಿದರು.

ಅವರು ಫೆ.10 ರಂದು ಜ್ಞಾನ ನಿಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಕಾರ್ಯಕ್ರಮದಲ್ಲಿ ಅಸಹಾಯಕ ಕುಟುಂಬಗಳಿಗೆ ನಿರ್ಮಿಸಲಾದ 25 ಮನೆಗಳ ಕೀಲಿ ಕೈ ಯನ್ನು ಹಸ್ತಾಂತರಿಸಲಾಗುವುದು. ಅಸಹಾಯಕ ಮಕ್ಕಳಿಗಾಗಿ ವಿದ್ಯಾನಿಧಿ ಕಾರ್ಯಕ್ರಮದ ಚಾಲನೆ ನಡೆಯಲಿದೆ. ಗಣ್ಯರನ್ನು ಮುಖ್ಯದ್ವಾರದಿಂದ ಸ್ವಾಗತಿಸಲಾಗುವುದು. ವಾಹನ ಪಾರ್ಕಿಂಗ್ ನ ವ್ಯವಸ್ಥೆಯನ್ನು ತಾಲೂಕು ಕ್ರೀಡಾಂಗಣದಲ್ಲಿ ಮಾಡಲಾಗಿದ್ದು, ಬಂದಂತಹ ಸರ್ವರಿಗೂ ಸಸ್ಯಾಹಾರ ಹಾಗೂ ಮಾಂಸಹಾರದ ವ್ಯವಸ್ಥೆಗಳಿವೆ. ಎಲ್ಲಾ ಸುಸಜ್ಜಿತ ವ್ಯವಸ್ಥೆಯನ್ನು ನಾಳೆ ಕಾರ್ಯರೂಪಕ್ಕೆ ತರಲಿದ್ದೇವೆ ಎಂದರು.

ನಿರ್ದೇಶಕ ಫಾ| ಮ್ಯಾಥ್ಯೂ ಕ್ಯಾಲಿಕಟ್ ಮಾತನಾಡಿ ಸಂಸದರು, ಶಾಸಕರು, ಆರಕ್ಷಕ ಇಲಾಖೆ ಸಹಕರಿಸುತ್ತೇವೆ ಎಂದಿದ್ದಾರೆ. ಪತ್ರಿಕಾ ಮಾಧ್ಯಮ, ದೃಶ್ಯ ಮಾಧ್ಯಮ ಹಾಗೂ ಎಲ್ಲರೂ ಸಹಕರಿಸಬೇಕೆಂದು ಕೇಳಿಕೊಂಡರು.

Related posts

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 3 ಲಕ್ಷ ಅನುದಾನ

Suddi Udaya

ಬಳಂಜ: 38 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಗುರುಪ್ರಸಾದ್ ಹೆಗ್ಡೆ,ಪ್ರ.ಕಾರ್ಯದರ್ಶಿಯಾಗಿ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಜಾರಿಗೆಬೈಲು ಬದ್ರಿಯಾ ಹಿದಾಯತುಲ್ ಇಸ್ಲಾಂ ಮದರಸ ಸಮಿತಿ ಹಾಗೂ ಗಲ್ಫ್ ಸಮಿತಿ ನೇತೃತ್ವದಲ್ಲಿ; ಜ. 7 : ಪರಿಮ ಜಾರಿಗೆ ಬೈಲಿನಲ್ಲಿ ಏಕದಿನ ಮತ ಪ್ರಭಾಷಣ – ಸನ್ಮಾನ ಕಾರ್ಯಕ್ರಮ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya
error: Content is protected !!