22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಫೆ.18: ಕೊಕ್ಕಡ ಕೇಸರಿ ಗೆಳೆಯರ ಬಳಗದ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ ಹಾಗೂ ಅಯೋಧ್ಯ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ

ಕೊಕ್ಕಡ: ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಆಶ್ರಯದಲ್ಲಿ ಹಿಂದೂ ಭಾಂದವರ ಅಯೋಧ್ಯ ಟ್ರೋಫಿ -2024 8 ಜನರ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಶ್ರೀ ರಾಮ ಜನ್ಮ ಭೂಮಿ ಅಯೋಧ್ಯ ಹೋರಾಟದ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ ಫೆ.18 ರಂದು ಕೊಕ್ಕಡ ಕೋರಿ ಗದ್ದೆ ಮೈದಾನದಲ್ಲಿ ನಡೆಯಲಿದೆ.

ಬೆಳಿಗ್ಗೆ ಉದ್ಘಾಟನೆಯನ್ನು ಈಶ್ವರ್ ಭಟ್ ಹಿತ್ತಿಲು, ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಿಕಟಪೂರ್ವಾಧ್ಯಕ್ಷರು ವೇದಮೂರ್ತಿ ಬಾಲಕೃಷ್ಣ ಕೆದಿಲಾಯ ವಹಿಸಲಿದ್ದಾರೆ.

ಮುಖ್ಯಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ರಾಜ್ಯ ಬಿಜೆಪಿ ಕಾರ್ಯದರ್ಶಿ ಬ್ರಿಜೇಶ್ ಚೌಟ, ಕೊಕ್ಕಡ ಗ್ರಾ.,ಪಂ. ಅಧ್ಯಕ್ಷೆ ಬೇಬಿ ಶಬರಾಡಿ, ಹಾಗೂ ಪ್ರಮುಖರು ಭಾಗವಹಿಸಲಿದ್ದಾರೆ.

ಸಂಜೆ ನಡೆಯುವ ಸಮಾರೋಪ ಸಮಾರಂಭದ ಮುಖ್ಯಅತಿಥಿಗಳಾಗಿ ಸೌತಡ್ಕ ಕ್ಷೇತ್ರದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ, ಹಾಗೂ ವಿವಿಧ ಸಂಘ ಸಂಸ್ಥೆಯ ಗಣ್ಯರು ಭಾಗವಹಿಸಲಿದ್ದಾರೆ.

ಬಹುಮಾನಗಳು: ಪ್ರಥಮ ರೂ. 8024 ಮತ್ತು ಟ್ರೋಫಿ, ದ್ವಿತೀಯ ರೂ. 5024 ಮತ್ತು ಟ್ರೋಪಿ, ತೃತೀಯ ರೂ. 3024 ಮತ್ತು ಟ್ರೋಫಿ, ಚತುರ್ಥ ರೂ. 2024 ಮತ್ತು ಟ್ರೋಫಿ , ಹಾಗೂ ಉತ್ತಮ ಬೌಲರ್, ಉತ್ತಮ ಬ್ಯಾಟ್ಸ್ ಮೆನ್, ಸರಣಿ ಶ್ರೇಷ್ಠ ಪ್ರಶಸ್ತಿ ಸಿಗಲಿದೆ.

Related posts

ಅ.24: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ಓಡಿಲ್ನಾಳ : ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಗೈಡ್ಸ್ ನಿಂದ ವೀರಯೋಧ ಸ್ಕೌಟ್ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಗೆ ಶ್ರದ್ಧಾಂಜಲಿ

Suddi Udaya

ಅಕ್ರಮ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸ್ ದಾಳಿ: ದನದ ಮಾಂಸ ಹಾಗೂ ಇಬ್ಬರು ಆರೋಪಿಗಳ ಬಂಧನ

Suddi Udaya
error: Content is protected !!