September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಫೆ.18: ಕೊಕ್ಕಡ ಕೇಸರಿ ಗೆಳೆಯರ ಬಳಗದ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ ಹಾಗೂ ಅಯೋಧ್ಯ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ

ಕೊಕ್ಕಡ: ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಆಶ್ರಯದಲ್ಲಿ ಹಿಂದೂ ಭಾಂದವರ ಅಯೋಧ್ಯ ಟ್ರೋಫಿ -2024 8 ಜನರ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಶ್ರೀ ರಾಮ ಜನ್ಮ ಭೂಮಿ ಅಯೋಧ್ಯ ಹೋರಾಟದ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ ಫೆ.18 ರಂದು ಕೊಕ್ಕಡ ಕೋರಿ ಗದ್ದೆ ಮೈದಾನದಲ್ಲಿ ನಡೆಯಲಿದೆ.

ಬೆಳಿಗ್ಗೆ ಉದ್ಘಾಟನೆಯನ್ನು ಈಶ್ವರ್ ಭಟ್ ಹಿತ್ತಿಲು, ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಿಕಟಪೂರ್ವಾಧ್ಯಕ್ಷರು ವೇದಮೂರ್ತಿ ಬಾಲಕೃಷ್ಣ ಕೆದಿಲಾಯ ವಹಿಸಲಿದ್ದಾರೆ.

ಮುಖ್ಯಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ರಾಜ್ಯ ಬಿಜೆಪಿ ಕಾರ್ಯದರ್ಶಿ ಬ್ರಿಜೇಶ್ ಚೌಟ, ಕೊಕ್ಕಡ ಗ್ರಾ.,ಪಂ. ಅಧ್ಯಕ್ಷೆ ಬೇಬಿ ಶಬರಾಡಿ, ಹಾಗೂ ಪ್ರಮುಖರು ಭಾಗವಹಿಸಲಿದ್ದಾರೆ.

ಸಂಜೆ ನಡೆಯುವ ಸಮಾರೋಪ ಸಮಾರಂಭದ ಮುಖ್ಯಅತಿಥಿಗಳಾಗಿ ಸೌತಡ್ಕ ಕ್ಷೇತ್ರದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ, ಹಾಗೂ ವಿವಿಧ ಸಂಘ ಸಂಸ್ಥೆಯ ಗಣ್ಯರು ಭಾಗವಹಿಸಲಿದ್ದಾರೆ.

ಬಹುಮಾನಗಳು: ಪ್ರಥಮ ರೂ. 8024 ಮತ್ತು ಟ್ರೋಫಿ, ದ್ವಿತೀಯ ರೂ. 5024 ಮತ್ತು ಟ್ರೋಪಿ, ತೃತೀಯ ರೂ. 3024 ಮತ್ತು ಟ್ರೋಫಿ, ಚತುರ್ಥ ರೂ. 2024 ಮತ್ತು ಟ್ರೋಫಿ , ಹಾಗೂ ಉತ್ತಮ ಬೌಲರ್, ಉತ್ತಮ ಬ್ಯಾಟ್ಸ್ ಮೆನ್, ಸರಣಿ ಶ್ರೇಷ್ಠ ಪ್ರಶಸ್ತಿ ಸಿಗಲಿದೆ.

Related posts

ಬೆಳ್ತಂಗಡಿಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಹಸಿರು ಹೊರೆ ಕಾಣಿಕೆ ಸಮರ್ಪಣೆಯ ಬಗ್ಗೆ ಸಮಾಲೋಚನಾ ಸಭೆ

Suddi Udaya

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯಿಂದ ಉದ್ಯಮದೊಂದಿಗೆ ಸಮಾಜಮುಖಿ ಸೇವೆ:

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya
error: Content is protected !!