September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

ಬಂಗಾಡಿ: ಬಂಗಾಡಿ-ಕೊಲ್ಲಿ ವಿದ್ಯುತ್ ಲೈನ್‌ನಲ್ಲಿ ಕಳೆದ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಗ್ರಾಹಕರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ಬೆಳ್ತಂಗಡಿ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ತಿಳಿಸಿದ್ದಾರೆ.

ಬಂಗಾಡಿ-ಕೊಲ್ಲಿ ವಿದ್ಯುತ್ ಫೀಡರ್‌ನಲ್ಲಿ ಬಹಳಷ್ಟು ಸಮಸ್ಯೆಗಳಿವೆ. ಇಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಲ್ಲಿ ಆಗಾಗ ಸಮಸ್ಯೆಗಳು ಕಾಡುತ್ತಿದೆ. ಕಳೆದ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲ, ಜೊತೆಗೆ ಆಗಾಗ ವಿದ್ಯುತ್ ಕೈಗೊಡುತ್ತಿದೆ. 3 ಫೇಸ್ ವಿದ್ಯುತ್ ಇಲ್ಲದಿರುವುದರಿಂದ ಪಂಪು ಚಾಲನೆಯಾಗದೆ ಕೃಷಿಕರಿಗೆ ಬಹಳಷ್ಟು ಸಮಸ್ಯೆಯಾಗಿದೆ. ಕಳೆದ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲ, ಕೃಷಿ ತೋಟಗಳಿಗೆ ಹಾಗೂ ಕುಡಿಯುವ ನೀರಿಗೂ ಸಮಸ್ಯೆಯಾಗಿದೆ. ಈ ಬಗ್ಗೆ ಮೇಲಾಧಿಕಾರಿಗಳಿಗೆ ಎಂಎಲ್‌ಸಿ ಹರೀಶ್ ಕುಮಾರ್ ಅವರಿಗೆ ದೂರು ನೀಡದ ನಂತರ ಸ್ವಲ್ಪ ಹೊತ್ತು 3 ಫೇಸ್ ವಿದ್ಯುತ್ ಬಂತು. ನಂತರ ಕೈಕೊಟ್ಟಿದೆ. ಇದರ ಬಗ್ಗೆ ಮೆಸ್ಕಾಂ ಇಲಾಖೆಯವರ ಗಮನಕ್ಕೆ ತಂದರೆ ಅವರು ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಸಂಬಂಧಪಟ್ಟವರು ಇದರ ಬಗ್ಗೆ ಕೂಡಲೇ ಸೂಕ್ತ ಕ್ರಮ ಕೈಗೊಂಡು ಬಂಗಾಡಿ-ಕೊಲ್ಲಿ ವಿದ್ಯುತ್ ಲೈನ್‌ಗೆ 3 ಫೇಸ್ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಮುಕುಂದ ಸುವರ್ಣ ಅವರು ಆಗ್ರಹಿಸಿದ್ದಾರೆ.

Related posts

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಮೇ 31: ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ`ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya

ನೆರಿಯ: ಮನೆಗೆ ಬೆಂಕಿ ತಗುಲಿ ಹಾನಿಯಾದ ಕುಟುಂಬಕ್ಕೆ ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಧನಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya

ಆ. 7 -8: “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಭಾಗವಹಿಸುವ ಅಭ್ಯರ್ಥಿಗಳಿಗೆ “ಶ್ರಮಿಕ ಶಾಸಕರ ಕಚೇರಿ” ಯಿಂದ ಬಸ್ ವ್ಯವಸ್ಥೆ

Suddi Udaya
error: Content is protected !!