September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಶಿಕ್ಷಕರಿಗೆ ಗುರುಸ್ಪಂದನ ಕಾರ್ಯಕ್ರಮ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ, ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹಯೋಗದೊಂದಿಗೆ,ಶಿಕ್ಷಕರ ಹಲವು ದಿನಗಳ ಬೇಡಿಕೆಯಾದ ಗುರುಸ್ಪಂದನ ಕಾರ್ಯಕ್ರಮವನ್ನು ಶ್ರೀ ಧ.ಮ.ಪ್ರೌಢಶಾಲೆ ಉಜಿರೆಯಲ್ಲಿ ನಡೆಸಲಾಯಿತು.


ಕಾರ್ಯಕ್ರಮವನ್ನು ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ರವರು ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಮಾಚಾರ್, ಸಂಘದ ಇದುವರೆಗಿನ ಸಾಧನೆಗಳ ಬಗ್ಗೆ ಮಾತನಾಡಿ ,ಎಲ್ಲರನ್ನೂ ಸಭೆಗೆ ಸ್ವಾಗತಿಸಿದರು.


ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀಮತಿ ಐರಿನ್ ಡೇಸ, ತಾಲೂಕು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷರಾದ ಎಡ್ವರ್ಡ್ ಡಿಸೋಜ, ಜಿ.ಪಿ.ಟಿ.ಸಂಘದ ತಾಲೂಕು ಅಧ್ಯಕ್ಷರಾದ ಯೋಗೀಶ್ ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಅಧೀಕ್ಷಕರಾದ ಲಿಡ್ವಿನ್ ಫೆರ್ನಾಂಡೀಸ್ ಕಾರ್ಯಕ್ರಮದ ಬಗ್ಗೆ ಸ್ಥೂಲ ಪರಿಚಯ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾದ ಕಿಶೋರ್ ಕುಮಾರ್ ವಹಿಸಿದ್ದರು.ಸಂಘದ ಸಹ ಕಾರ್ಯದರ್ಶಿ ಶ್ರೀಮತಿ ಜ್ಯೋತಿ ಎಂ.ಎಸ್.ಕಾರ್ಯಕ್ರಮ ನಿರ್ವಹಿಸಿದರು. ನಂತರ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿಷಯ ನಿರ್ವಾಹಕರಾದ ಆದರ್ಶ್, ಇಮ್ರಾನ್, ಸುರೇಶ್, ವಜ್ರಕುಮಾರ್, ಸಂತೋಷ್ , ರಾಜೇಂದ್ರ ಮತ್ತು ಶಾರದಾ ಭಟ್ ಸಹಕಾರದಲ್ಲಿ ತಮ್ಮ ವ್ಯಾಪ್ತಿಯ ಶಿಕ್ಷಕರ ಸೇವಾಪುಸ್ತಕಗಳ ಪರಿಶೀಲಿಸಲು ಅವಕಾಶ ನೀಡಲಾಯಿತು. ಸಿ.ಆರ್.ಪಿ.ಗಳಾದ ಶ್ರೀಮತಿ ಪ್ರತಿಮ ,ಪ್ರಶಾಂತ್ ಮತ್ತು ವಿಲ್ಫ್ರೆಢ್ ಪಿಂಟೊ ಸಹಕರಿಸಿದರು.

Related posts

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

Suddi Udaya

ಬಂದಾರು : ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ , ದರ್ಶನ ಬಲಿ , ಬಟ್ಟಲು ಕಾಣಿಕೆ, ಮಹಾಪೂಜೆ

Suddi Udaya

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!