July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಶಿಕ್ಷಕರಿಗೆ ಗುರುಸ್ಪಂದನ ಕಾರ್ಯಕ್ರಮ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ, ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹಯೋಗದೊಂದಿಗೆ,ಶಿಕ್ಷಕರ ಹಲವು ದಿನಗಳ ಬೇಡಿಕೆಯಾದ ಗುರುಸ್ಪಂದನ ಕಾರ್ಯಕ್ರಮವನ್ನು ಶ್ರೀ ಧ.ಮ.ಪ್ರೌಢಶಾಲೆ ಉಜಿರೆಯಲ್ಲಿ ನಡೆಸಲಾಯಿತು.


ಕಾರ್ಯಕ್ರಮವನ್ನು ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ರವರು ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಮಾಚಾರ್, ಸಂಘದ ಇದುವರೆಗಿನ ಸಾಧನೆಗಳ ಬಗ್ಗೆ ಮಾತನಾಡಿ ,ಎಲ್ಲರನ್ನೂ ಸಭೆಗೆ ಸ್ವಾಗತಿಸಿದರು.


ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀಮತಿ ಐರಿನ್ ಡೇಸ, ತಾಲೂಕು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷರಾದ ಎಡ್ವರ್ಡ್ ಡಿಸೋಜ, ಜಿ.ಪಿ.ಟಿ.ಸಂಘದ ತಾಲೂಕು ಅಧ್ಯಕ್ಷರಾದ ಯೋಗೀಶ್ ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಅಧೀಕ್ಷಕರಾದ ಲಿಡ್ವಿನ್ ಫೆರ್ನಾಂಡೀಸ್ ಕಾರ್ಯಕ್ರಮದ ಬಗ್ಗೆ ಸ್ಥೂಲ ಪರಿಚಯ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾದ ಕಿಶೋರ್ ಕುಮಾರ್ ವಹಿಸಿದ್ದರು.ಸಂಘದ ಸಹ ಕಾರ್ಯದರ್ಶಿ ಶ್ರೀಮತಿ ಜ್ಯೋತಿ ಎಂ.ಎಸ್.ಕಾರ್ಯಕ್ರಮ ನಿರ್ವಹಿಸಿದರು. ನಂತರ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿಷಯ ನಿರ್ವಾಹಕರಾದ ಆದರ್ಶ್, ಇಮ್ರಾನ್, ಸುರೇಶ್, ವಜ್ರಕುಮಾರ್, ಸಂತೋಷ್ , ರಾಜೇಂದ್ರ ಮತ್ತು ಶಾರದಾ ಭಟ್ ಸಹಕಾರದಲ್ಲಿ ತಮ್ಮ ವ್ಯಾಪ್ತಿಯ ಶಿಕ್ಷಕರ ಸೇವಾಪುಸ್ತಕಗಳ ಪರಿಶೀಲಿಸಲು ಅವಕಾಶ ನೀಡಲಾಯಿತು. ಸಿ.ಆರ್.ಪಿ.ಗಳಾದ ಶ್ರೀಮತಿ ಪ್ರತಿಮ ,ಪ್ರಶಾಂತ್ ಮತ್ತು ವಿಲ್ಫ್ರೆಢ್ ಪಿಂಟೊ ಸಹಕರಿಸಿದರು.

Related posts

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

Suddi Udaya

ಕಳಿಯ: ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

Suddi Udaya
error: Content is protected !!