24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ‘ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು’ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿವಾದಾತ್ಮಕ ಪೋಸ್ಟ್ ಹಾಕಿದ್ದು, ಇದು ರಾಜ್ಯಾದ್ಯಂತ ಭಾರೀ ಚರ್ಚೆಯನ್ನೇ ಹುಟ್ಟು ಹಾಕುತ್ತಿದೆ.

ಶಾಸಕ ಹರೀಶ್ ಪೂಂಜ ಅವರು ಫೇಸ್‌ಬುಕ್‌ನಲ್ಲಿ ‘ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು. ಈ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಸಲ್ಲಿಕೆಯಾಗಬೇಕು. ಹಿಂದೂಗಳು ಕಟ್ಟಿದ ತೆರಿಗೆ ಹಣ ಇತರ ಧರ್ಮದ ಜನರಿಗೆ ಸೇರುವುದು ಅನ್ಯಾಯ’ ಎಂದು ಪೋಸ್ಟ್ ಹಾಕಿದ್ದರು. ಇದು ಸಾಮಾಜಿಕ ಜಾಲತಾಣ, ರಾಜಕೀಯ ವಲಯದಲ್ಲಿ ಹೊಸ ವಿವಾದ ಹುಟ್ಟು ಹಾಕಿದೆ.


ವಿವಾದಕ್ಕೆ ಸಂಬಂಧಿಸಿ ಮಾಧ್ಯಮದ ಜತೆ ಮಾತನಾಡಿದ ಶಾಸಕ ಹರೀಶ್ ಪೂಂಜ ಅವರು, ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, “ಸಂಸದ ಡಿ.ಕೆ. ಸುರೇಶ್ ಕುಮಾರ್ ಅವರ ದೇಶ ವಿಭಜನೆ ಹೇಳಿಕೆಗೆ ಸಾಮಾನ್ಯ ರೀತಿ ಖಂಡನೆ ಮಾಡಿದರೆ ಅವರಿಗೆ ಅರ್ಥ ಆಗಲ್ಲ. ಅದಕ್ಕಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದೇನೆ. ಹಿಂದೂಗಳ ತೆರಿಗೆಯನ್ನು ಹಿಂದೂಗಳಿಗೆ ಅಭಿವೃದ್ಧಿ ಮಾಡಿ ಅಂತಾ ಕೇಳುವುದರಲ್ಲಿ ತಪ್ಪೇನಿದೆ ?,” ಎಂದು ಹೇಳಿದರು.
ಕಾಂಗ್ರೆಸ್‌ನವರು ಉತ್ತರ-ದಕ್ಷಿಣ ಭಾರತ ಅಂತಾ ವಿಭಜನೆ ಮಾಡುತ್ತಿದ್ದಾರೆ. ಹಾಗಿರುವಾಗ ಹಿಂದೂಗಳ ತೆರಿಗೆಯನ್ನು ಲೆಕ್ಕ ಹಾಕೋಕೆ ಕಷ್ಟವೇ ? ಪ್ರತಿಯೊಬ್ಬನ ಹೆಸರಿನ ಮುಂದೆ ಅವನ ಧರ್ಮವೂ ಉಲ್ಲೇಖವಾಗಿರುತ್ತದೆ. ಸಿಂಗಲ್ ಟ್ಯಾಪ್‌ನಲ್ಲಿ ತೆರಿಗೆಯನ್ನು ವಿಭಾಗಿಸಬಹುದಾಗಿದೆ,” ಎಂದು ಹೇಳಿಕೆ ನೀಡಿದ್ದಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ನೂತನ ಸಮಿತಿ ಪದಗ್ರಹಣ

Suddi Udaya

ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ

Suddi Udaya

2೦47ರಲ್ಲಿ ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಉಜಿರೆ : ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ

Suddi Udaya
error: Content is protected !!