25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

ನಡ: ಮಂಜೊಟ್ಟೆಯ ಹೋಲಿ ಕ್ರಾಸ್ ಚರ್ಚ್‌ ಆರಾಧ್ಯ ಪವಿತ್ರ ಶಿಲುಬೆಯ ಪುಣ್ಯ ಅವಶೇಷದ ಭವ್ಯ ಮೆರವಣಿಗೆ ಹಾಗೂ ಸಂಭ್ರಮವು ಫೆ.18 ರಂದು ಶ್ರದ್ಧಾ ಭಕ್ತಿಯಿಂದ ಜರುಗಲಿದೆ. ಈ ಪವಿತ್ರ ಶಿಲುಬೆಯ ಪುಣ್ಯ ಅವಶೇಷವು ನಮ್ಮ ಚರ್ಚ್‌ನ ಸದಸ್ಯರಾದ ವಿನ್ಸೆಂಟ್ ಪಿರೇರಾ ಮುಖಾಂತರ ಇಟಲಿ ದೇಶದಲ್ಲಿ ಕಾಪುಚಿನ್ ಪ್ರೊವಿನ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ವಂದನೀಯ ಜೊಸ್ಸಿ ಫೆರ್ನಾಂಡೀಸ್ ಇವರ ಮೂಲಕ ಮಂಜೊಟ್ಟಿ ಚರ್ಚ್‌ಗೆ ದೊರಕಿದೆ. ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್ ಪಾವ್ಲ್ ಸಲ್ದಾನಾ ಅವರು ಈ ಅವಶೇಷವನ್ನು ಪ್ರತಿಷ್ಠಾಪಿಸಲು ಪರವಾನಿಗೆ ನೀಡಿದ್ದಾರೆ.

ಪವಿತ್ರ ಶಿಲುಬೆಯ ಅವಶೇಷದ ಮೆರವಣಿಗೆ: ಫೆ.18ರ ಭಾನುವಾರದಂದು ಪವಿತ್ರ ಶಿಲುಬೆಯ ಅವಶೇಷದ (ವಾಹನ) ಭವ್ಯ ಮೆರವಣಿಗೆಯು ಸಾಯಂಕಾಲ 4 ಗಂಟೆಗೆ ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್‌ನಿಂದ ಪ್ರಾರಂಭಗೊಂಡು ಮಂಜೊಟ್ಟಿ ಹೋಲಿಕ್ರಾಸ್ ಚರ್ಚ್‌ಗೆ ಬರಲಿದೆ. ತದನಂತರ ಬೆಳ್ತಂಗಡಿ ವಲಯದ ಪ್ರಧಾನ ಧರ್ಮಗುರುಗಳಾದ ಅತೀ ವಂದನೀಯ ವಾಲ್ಟರ್ ಡಿ ಮೆಲ್ಲೊ ಅವರು ದಿವ್ಯ ಬಲಿಪೂಜೆಯೊಂದಿಗೆ ಪುಣ್ಯ ಅವಶೇಷದ ಪ್ರತಿಷ್ಠಾಪನೆಯನ್ನು ನೆರವೇರಿಸಲಿದ್ದಾರೆ.


ಧ್ಯಾನಕೂಟ: ಈ ದಿವ್ಯ ಸಂಭ್ರಮದ ಪೂರ್ವತಯಾರಿಯಾಗಿ ಕನ್ನಡ ಭಾಷೆಯಲ್ಲಿ ಮೂರು ದಿನಗಳ ಧ್ಯಾನಕೂಟವನ್ನು ಫೆ.15ರಿಂದ 17ರ ವರೆಗೆ ಹೋಲಿ ಕ್ರಾಸ್ ಚರ್ಚಿನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ದಿವ್ಯ ಧ್ಯಾನಕೂಟವನ್ನು ಮದರ್‌ ಹೋಮ್ ರಿಟ್ರೇಟ್ ಸೆಂಟರ್ ಕಣ್ಣೂರು ಇದರ ಧರ್ಮಗುರುಗಳ ತಂಡ ನೆರವೇರಿಸಲಿದೆ. ಈ ಧ್ಯಾನ ಕೂಟವು ಸಾಯಂಕಾಲ 4 ಗಂಟೆಯಿಂದ 8ರ ವರೆಗೆ ನಡೆಯಲಿದ್ದು ಪ್ರತಿದಿನ ಸಾಯಂಕಾಲ ಭಕ್ತಾದಿಗಳಿಗೆ ಊಟದ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ.

ಈ ಎಲ್ಲಾ ಪುಣ್ಯ ಕಾರ್ಯಕ್ರಮಗಳ ನೇರ ಪ್ರಸಾರವನ್ನು Holy Cross Manjotti Yotube Channel ನಲ್ಲಿ ನೆರಪ್ರಸಾರ ಮಾಡಲಾಗುವುದು ಎಂದು ಹೋಲಿ ಕ್ರಾಸ್‌ಚರ್ಚ್‌ ನ ಧರ್ಮಗುರುಗಳಾದ ವಂದನೀಯ ಸ್ವಾಮಿ ಪ್ರವೀಣ್ ಡಿ’ಸೋಜ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ನಾಳೆ (ಎ.9) ವಿದ್ಯುತ್ ನಿಲುಗಡೆ

Suddi Udaya
error: Content is protected !!