ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

Suddi Udaya

ಉಜಿರೆ : ಇಲ್ಲಿಯ ಗ್ರಾಮ ಪಂಚಾಯತ್ ಬಳಿ ಇರುವ ಪ್ರಗತಿ ಮಹಿಳಾ ಮಂಡಲ ಕಟ್ಟಡದಲ್ಲಿ ನೂತನವಾಗಿ ಪ್ರಾರಂಭಗೊಂಡ ಮಹಾಗಣಪತಿ ದಿನಸಿ ಅಂಗಡಿಯ ಶುಭಾರಂಭವು ಫೆ.10ರಂದು ನಡೆಯಿತು.

ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದ ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ಮಾತನಾಡಿ ಪ್ರತಿಯೊಂದು ಉದ್ಯಮವು ಕೂಡ ತಕ್ಷಣ ಯಶಸ್ಸನ್ನು ಕಾಣುವುದಿಲ್ಲ, ನಿರಂತರ ಪರಿಶ್ರಮದಿಂದ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದು ಸಂಸ್ಥೆಗೆ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಅರವಿಂದ ಕಾರಂತ್, ಉಜಿರೆ ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಪ್ರಕಾಶ್ ಗೌಡ, ಛಾಯಾಗ್ರಾಹಕರ ಸಂಘದ ಅಧ್ಯಕ್ಷೆ ಸಿಲ್ವಿಯಾ ಕೊರ್ಡೆರೋ, ಉದ್ಯಮಿ ಸುಕುಮಾರ್ ಶೆಟ್ಟಿ, ಜನಾರ್ದನ ಸಿಂಧೂ ಎಲೆಕ್ಟ್ರಿಕಲ್ಸ್ ಹಾಗೂ ಮಾಲಕರು, ಬಂಧು ಮಿತ್ರರು ಉಪಸ್ಥಿತರಿದ್ದರು.

Leave a Comment

error: Content is protected !!