July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

ಕೊಕ್ಕಡ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ನೆಲ್ಯಾಡಿ-ಕೊಕ್ಕಡ ರಸ್ತೆಯ ನೆಲ್ಯಾಡಿ ಪುತ್ಯೆ ಸಮೀಪ ಫೆ.9 ರಂದು ರಾತ್ರಿ ನಡೆದಿದೆ.


ನೆಲ್ಯಾಡಿ ಪಡ್ಡಡ್ಕ ನಿವಾಸಿ ಬೆನ್ನಿ, ಅರಸಿನಮಕ್ಕಿ ಸಮೀಪದ ಮುಂಡ್ರೇಲು ನಿವಾಸಿಗಳಾದ ಮಹೇಂದ್ರ ಹಾಗೂ ಮಂಜುನಾಥ ಎಂಬವರು ಗಾಯಗೊಂಡು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ರಿಂಗ್ ವರ್ಕ್ಸ್ ಕೆಲಸ ನಿರ್ವಹಿಸುತ್ತಿರುವ ಪಡ್ಡಡ್ಕ ನಿವಾಸಿ ಬೆನ್ನಿ ಅವರು ತನ್ನ ಬೈಕ್‌ನಲ್ಲಿ ಕೊಕ್ಕಡದಿಂದ ನೆಲ್ಯಾಡಿಗೆ ಬರುತ್ತಿದ್ದು ಮಹೇಂದ್ರ ಹಾಗೂ ಮಂಜುನಾಥ ಅವರು ನೆಲ್ಯಾಡಿಯಿಂದ ಕೊಕ್ಕಡ ಕಡೆಗೆ ತಮ್ಮ ಬೈಕ್‌ನಲ್ಲಿ ಹೋಗುತ್ತಿದ್ದು ಪುತ್ಯೆ ಸಮೀಪ ಮಾಯಿಲಕೋಟೆ ದೈವಸ್ಥಾನಕ್ಕೆ ತಿರುಗುವಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು ಕೊಕ್ಕಡ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆನ್ನಿ ಅವರು ಪುತ್ತೂರು ಪ್ರಗತಿ ಆಸ್ಪತ್ರೆಯಲ್ಲಿ ಹಾಗೂ ಇನ್ನಿಬ್ಬರು ಗಾಯಾಳುಗಳ ಪೈಕಿ ಒಬ್ಬರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಾಗೂ ಇನ್ನೊಬ್ಬರು ಮಂಗಳೂರು ಫಾದರ್ ಮುಲ್ಲರ್‍ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

Related posts

ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಕೊಕ್ಕಡ ಶಾಖೆಯು ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

Suddi Udaya

ಜೆ ಇ ಇ ಮೈನ್ಸ್ ಪರೀಕ್ಷೆ: ವಾಣಿ ಕಾಲೇಜಿನ ವಿದ್ಯಾರ್ಥಿ ಆದರ್ಶ್ ಗೆ ಶೇ. 98.08 ಫಲಿತಾಂಶ

Suddi Udaya

ಬಂಟ ಕಲಾ ಸಂಭ್ರಮ ಭಾರತ ದರ್ಶನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya

ನಾವೂರು ಸರಕಾರಿ ಪ್ರೌಢ ಶಾಲಾ ಮಂತ್ರಿ ಮಂಡಲ ರಚನೆ

Suddi Udaya
error: Content is protected !!