September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

ಕೊಕ್ಕಡ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ನೆಲ್ಯಾಡಿ-ಕೊಕ್ಕಡ ರಸ್ತೆಯ ನೆಲ್ಯಾಡಿ ಪುತ್ಯೆ ಸಮೀಪ ಫೆ.9 ರಂದು ರಾತ್ರಿ ನಡೆದಿದೆ.


ನೆಲ್ಯಾಡಿ ಪಡ್ಡಡ್ಕ ನಿವಾಸಿ ಬೆನ್ನಿ, ಅರಸಿನಮಕ್ಕಿ ಸಮೀಪದ ಮುಂಡ್ರೇಲು ನಿವಾಸಿಗಳಾದ ಮಹೇಂದ್ರ ಹಾಗೂ ಮಂಜುನಾಥ ಎಂಬವರು ಗಾಯಗೊಂಡು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ರಿಂಗ್ ವರ್ಕ್ಸ್ ಕೆಲಸ ನಿರ್ವಹಿಸುತ್ತಿರುವ ಪಡ್ಡಡ್ಕ ನಿವಾಸಿ ಬೆನ್ನಿ ಅವರು ತನ್ನ ಬೈಕ್‌ನಲ್ಲಿ ಕೊಕ್ಕಡದಿಂದ ನೆಲ್ಯಾಡಿಗೆ ಬರುತ್ತಿದ್ದು ಮಹೇಂದ್ರ ಹಾಗೂ ಮಂಜುನಾಥ ಅವರು ನೆಲ್ಯಾಡಿಯಿಂದ ಕೊಕ್ಕಡ ಕಡೆಗೆ ತಮ್ಮ ಬೈಕ್‌ನಲ್ಲಿ ಹೋಗುತ್ತಿದ್ದು ಪುತ್ಯೆ ಸಮೀಪ ಮಾಯಿಲಕೋಟೆ ದೈವಸ್ಥಾನಕ್ಕೆ ತಿರುಗುವಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು ಕೊಕ್ಕಡ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆನ್ನಿ ಅವರು ಪುತ್ತೂರು ಪ್ರಗತಿ ಆಸ್ಪತ್ರೆಯಲ್ಲಿ ಹಾಗೂ ಇನ್ನಿಬ್ಬರು ಗಾಯಾಳುಗಳ ಪೈಕಿ ಒಬ್ಬರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಾಗೂ ಇನ್ನೊಬ್ಬರು ಮಂಗಳೂರು ಫಾದರ್ ಮುಲ್ಲರ್‍ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

Related posts

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ; ಧ್ವಜಾರೋಹಣ-ಗ್ರಂಥಾಲಯ ಉದ್ಘಾಟನೆ- ಸಭಾ ಕಾರ್ಯಕ್ರಮ

Suddi Udaya

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

Suddi Udaya

ಮುಗೇರಡ್ಕ: ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಇದರ ಆಶ್ರಯದಲ್ಲಿ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ: ಆರೋಪಿತನಿಂದ ರೂ 5‌.65 ಲಕ್ಷ ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ

Suddi Udaya
error: Content is protected !!