March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

ಬಂಗಾಡಿ: ಬಂಗಾಡಿ-ಕೊಲ್ಲಿ ವಿದ್ಯುತ್ ಲೈನ್‌ನಲ್ಲಿ ಕಳೆದ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಗ್ರಾಹಕರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ಬೆಳ್ತಂಗಡಿ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ತಿಳಿಸಿದ್ದಾರೆ.

ಬಂಗಾಡಿ-ಕೊಲ್ಲಿ ವಿದ್ಯುತ್ ಫೀಡರ್‌ನಲ್ಲಿ ಬಹಳಷ್ಟು ಸಮಸ್ಯೆಗಳಿವೆ. ಇಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಲ್ಲಿ ಆಗಾಗ ಸಮಸ್ಯೆಗಳು ಕಾಡುತ್ತಿದೆ. ಕಳೆದ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲ, ಜೊತೆಗೆ ಆಗಾಗ ವಿದ್ಯುತ್ ಕೈಗೊಡುತ್ತಿದೆ. 3 ಫೇಸ್ ವಿದ್ಯುತ್ ಇಲ್ಲದಿರುವುದರಿಂದ ಪಂಪು ಚಾಲನೆಯಾಗದೆ ಕೃಷಿಕರಿಗೆ ಬಹಳಷ್ಟು ಸಮಸ್ಯೆಯಾಗಿದೆ. ಕಳೆದ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲ, ಕೃಷಿ ತೋಟಗಳಿಗೆ ಹಾಗೂ ಕುಡಿಯುವ ನೀರಿಗೂ ಸಮಸ್ಯೆಯಾಗಿದೆ. ಈ ಬಗ್ಗೆ ಮೇಲಾಧಿಕಾರಿಗಳಿಗೆ ಎಂಎಲ್‌ಸಿ ಹರೀಶ್ ಕುಮಾರ್ ಅವರಿಗೆ ದೂರು ನೀಡದ ನಂತರ ಸ್ವಲ್ಪ ಹೊತ್ತು 3 ಫೇಸ್ ವಿದ್ಯುತ್ ಬಂತು. ನಂತರ ಕೈಕೊಟ್ಟಿದೆ. ಇದರ ಬಗ್ಗೆ ಮೆಸ್ಕಾಂ ಇಲಾಖೆಯವರ ಗಮನಕ್ಕೆ ತಂದರೆ ಅವರು ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಸಂಬಂಧಪಟ್ಟವರು ಇದರ ಬಗ್ಗೆ ಕೂಡಲೇ ಸೂಕ್ತ ಕ್ರಮ ಕೈಗೊಂಡು ಬಂಗಾಡಿ-ಕೊಲ್ಲಿ ವಿದ್ಯುತ್ ಲೈನ್‌ಗೆ 3 ಫೇಸ್ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಮುಕುಂದ ಸುವರ್ಣ ಅವರು ಆಗ್ರಹಿಸಿದ್ದಾರೆ.

Related posts

ಆಗಷ್ಟ್ 28 : ಸೌಜನ್ಯ ಪ್ರಕರಣದ ತನಿಖೆಗೆ ಒತ್ತಾಯಿಸಿ ಚಲೋ ಬೆಳ್ತಂಗಡಿ ಮಹಾಧರಣಿ

Suddi Udaya

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ಪಿ.ಎಚ್.ಡಿ. ಪದವಿ

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಸಂಸ್ಥಾಪಕ ಗಿರೀಶ್ ಕೆ ಎಚ್ ರವರಿಂದ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

Suddi Udaya

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya
error: Content is protected !!