25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

ಬಂಗಾಡಿ: ಬಂಗಾಡಿ-ಕೊಲ್ಲಿ ವಿದ್ಯುತ್ ಲೈನ್‌ನಲ್ಲಿ ಕಳೆದ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಗ್ರಾಹಕರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ಬೆಳ್ತಂಗಡಿ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ತಿಳಿಸಿದ್ದಾರೆ.

ಬಂಗಾಡಿ-ಕೊಲ್ಲಿ ವಿದ್ಯುತ್ ಫೀಡರ್‌ನಲ್ಲಿ ಬಹಳಷ್ಟು ಸಮಸ್ಯೆಗಳಿವೆ. ಇಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಲ್ಲಿ ಆಗಾಗ ಸಮಸ್ಯೆಗಳು ಕಾಡುತ್ತಿದೆ. ಕಳೆದ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲ, ಜೊತೆಗೆ ಆಗಾಗ ವಿದ್ಯುತ್ ಕೈಗೊಡುತ್ತಿದೆ. 3 ಫೇಸ್ ವಿದ್ಯುತ್ ಇಲ್ಲದಿರುವುದರಿಂದ ಪಂಪು ಚಾಲನೆಯಾಗದೆ ಕೃಷಿಕರಿಗೆ ಬಹಳಷ್ಟು ಸಮಸ್ಯೆಯಾಗಿದೆ. ಕಳೆದ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲ, ಕೃಷಿ ತೋಟಗಳಿಗೆ ಹಾಗೂ ಕುಡಿಯುವ ನೀರಿಗೂ ಸಮಸ್ಯೆಯಾಗಿದೆ. ಈ ಬಗ್ಗೆ ಮೇಲಾಧಿಕಾರಿಗಳಿಗೆ ಎಂಎಲ್‌ಸಿ ಹರೀಶ್ ಕುಮಾರ್ ಅವರಿಗೆ ದೂರು ನೀಡದ ನಂತರ ಸ್ವಲ್ಪ ಹೊತ್ತು 3 ಫೇಸ್ ವಿದ್ಯುತ್ ಬಂತು. ನಂತರ ಕೈಕೊಟ್ಟಿದೆ. ಇದರ ಬಗ್ಗೆ ಮೆಸ್ಕಾಂ ಇಲಾಖೆಯವರ ಗಮನಕ್ಕೆ ತಂದರೆ ಅವರು ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಸಂಬಂಧಪಟ್ಟವರು ಇದರ ಬಗ್ಗೆ ಕೂಡಲೇ ಸೂಕ್ತ ಕ್ರಮ ಕೈಗೊಂಡು ಬಂಗಾಡಿ-ಕೊಲ್ಲಿ ವಿದ್ಯುತ್ ಲೈನ್‌ಗೆ 3 ಫೇಸ್ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಮುಕುಂದ ಸುವರ್ಣ ಅವರು ಆಗ್ರಹಿಸಿದ್ದಾರೆ.

Related posts

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಡಾ. ಸುಬ್ರಹ್ಮಣ್ಯ ಭಟ್ ರವರ ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ಬಿಡುಗಡೆ

Suddi Udaya

ಮೊಗ್ರು: ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ, ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ಪೂಜನ ಕಾರ್ಯಕ್ರಮ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಚ್ಚಿನ ಪ್ರಾ.ಕೃ.ಪ.ಸ. ಸಂಘದ ನೂತನ ಕಟ್ಟಡಕ್ಕೆ ರೂ.7 ಲಕ್ಷ ಚೆಕ್ ಹಸ್ತಾಂತರ

Suddi Udaya
error: Content is protected !!