22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

ಬಂಗಾಡಿ: ಬಂಗಾಡಿ-ಕೊಲ್ಲಿ ವಿದ್ಯುತ್ ಲೈನ್‌ನಲ್ಲಿ ಕಳೆದ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಗ್ರಾಹಕರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ಬೆಳ್ತಂಗಡಿ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ತಿಳಿಸಿದ್ದಾರೆ.

ಬಂಗಾಡಿ-ಕೊಲ್ಲಿ ವಿದ್ಯುತ್ ಫೀಡರ್‌ನಲ್ಲಿ ಬಹಳಷ್ಟು ಸಮಸ್ಯೆಗಳಿವೆ. ಇಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಲ್ಲಿ ಆಗಾಗ ಸಮಸ್ಯೆಗಳು ಕಾಡುತ್ತಿದೆ. ಕಳೆದ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲ, ಜೊತೆಗೆ ಆಗಾಗ ವಿದ್ಯುತ್ ಕೈಗೊಡುತ್ತಿದೆ. 3 ಫೇಸ್ ವಿದ್ಯುತ್ ಇಲ್ಲದಿರುವುದರಿಂದ ಪಂಪು ಚಾಲನೆಯಾಗದೆ ಕೃಷಿಕರಿಗೆ ಬಹಳಷ್ಟು ಸಮಸ್ಯೆಯಾಗಿದೆ. ಕಳೆದ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲ, ಕೃಷಿ ತೋಟಗಳಿಗೆ ಹಾಗೂ ಕುಡಿಯುವ ನೀರಿಗೂ ಸಮಸ್ಯೆಯಾಗಿದೆ. ಈ ಬಗ್ಗೆ ಮೇಲಾಧಿಕಾರಿಗಳಿಗೆ ಎಂಎಲ್‌ಸಿ ಹರೀಶ್ ಕುಮಾರ್ ಅವರಿಗೆ ದೂರು ನೀಡದ ನಂತರ ಸ್ವಲ್ಪ ಹೊತ್ತು 3 ಫೇಸ್ ವಿದ್ಯುತ್ ಬಂತು. ನಂತರ ಕೈಕೊಟ್ಟಿದೆ. ಇದರ ಬಗ್ಗೆ ಮೆಸ್ಕಾಂ ಇಲಾಖೆಯವರ ಗಮನಕ್ಕೆ ತಂದರೆ ಅವರು ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಸಂಬಂಧಪಟ್ಟವರು ಇದರ ಬಗ್ಗೆ ಕೂಡಲೇ ಸೂಕ್ತ ಕ್ರಮ ಕೈಗೊಂಡು ಬಂಗಾಡಿ-ಕೊಲ್ಲಿ ವಿದ್ಯುತ್ ಲೈನ್‌ಗೆ 3 ಫೇಸ್ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಮುಕುಂದ ಸುವರ್ಣ ಅವರು ಆಗ್ರಹಿಸಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಗೆ ಧನಸಹಾಯ

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

Suddi Udaya

ಉಜಿರೆಯ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬಂದಾರು: ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya
error: Content is protected !!