25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಆಡಳಿತಕ್ಕೊಳಪಟ್ಟ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಮುಖ್ಯ ಅಭ್ಯಾಗತರಾಗಿ ಕಡಬದ ಸರಸ್ವತಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವೆಂಕಟ್ರಮಣ ರಾವ್ ಆಗಮಿಸಿ ಸಂಸ್ಕಾರಯುತ ಶಿಕ್ಷಣದಿಂದ ದೇಶದ ಏಳಿಗೆ ಸಾಧ್ಯ, ವಿದ್ಯಾರ್ಥಿಗಳು ಉತ್ತಮ ಆದರ್ಶಗಳನ್ನು ಮೈಗೂಡಿಸುವ ಮೂಲಕ ಶಿಕ್ಷಣ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು. ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಜಾಲಿ ಓ ಎ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.


ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳು ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಿಗೆ ದೀಪವನ್ನು ಹಸ್ತಾಂತರಿಸಿದರು.
ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಪೂಜಿತ್ ಸ್ವಾಗತಿಸಿ, ಧನುಷ್ ಕೆ ಎನ್ ಕಾರ್ಯಕ್ರಮವನ್ನು ನಿರೂಪಿಸಿ, ತುಳಸಿ ಧನ್ಯವಾದಗೈದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಭಕ್ತರಿಂದ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya

ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಬೆಳಾಲು ಶ್ರೀಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್, ಪದವಿ ಪೂರ್ವ ಹಾಗೂ ಪ್ರೌಢಶಾಲಾ ವಿಭಾಗದ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!