July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

ಕೊಕ್ಕಡ: ಪ್ರಸಿದ್ಧ ಶ್ರದ್ಧಾ ಕೇಂದ್ರ , ಯಾತ್ರಾ ಸ್ಥಳವಾದ ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಯು ಶುಭಾರಂಭಗೊಂಡಿತು.

ಬೆಳ್ತಂಗಡಿ ಯಲ್ ಐ ಸಿ ಅಭಿವೃದ್ಧಿ ಅಧಿಕಾರಿ ಉದಯ ಶಂಕರ್ ಕೆ ದೀಪ ಬೆಳಗಿಸಿ ಶುಭ ಹಾರೈಸಿದರು.

ಅರಸಿನಮಕ್ಕಿ ಗ್ರಾ ಪಂ ಉಪಾಧ್ಯಕ್ಷ ಸುಧೀರ್ ಕುಮಾರ್, ಗಣೇಶ್ ಕೆ ಹೊಸ್ತೋಟ, ಧರ್ಮಸ್ಥಳ ಬಿ ಜೆ ಪಿ ಶಕ್ತಿ ಕೇಂದ್ರದ ಕಾರ್ಯದರ್ಶಿ ಕರುಣಾಕರ ಶಿಶಿಲ, ನಿವೃತ್ತ ಯೋಧ ಸುಭೇದಾರ್ ಮೇಜರ್ ಮಹಾಬಲ,ಗ್ರಾ ಪಂ ಸದಸ್ಯ ಪ್ರೇಮಚಂದ್ರ , ಸುಂದರ ರಾಣ್ಯ, ಕೃಷ್ಣಪ್ಪ ಗೌಡ ಪಡ್ಡಯಿಬೆಟ್ಟು ಹಾಗೂ ಮನೆಯವರು, ಹತ್ಯಡ್ಕ ಸಿ ಎ ಬ್ಯಾಂಕ್ ನಿರ್ದೇಶಕ ಮುರಳಿ ಶೆಟ್ಟಿಗಾರ್, ಶಿಶಿಲ ಗ್ರಾ ಪಂ ಅಧ್ಯಕ್ಷ ಸುಧೀನ್, ಹಿತೈಷಿಗಳು ಉಪಸ್ಥಿತರಿದ್ದರು.

ಮಳಿಗೆಯ ಮಾಲಕ ಸುದರ್ಶನ ಗೌಡ ಎಲ್ಲರನ್ನು ಸ್ವಾಗತಿಸಿ ಉದ್ಯಮಕ್ಕೆ ಎಲ್ಲರ ಬೆಂಬಲ ಕೋರಿದರು.

ಮಳಿಗೆಯಲ್ಲಿ ಕೆಎಂಎಫ್ ನಂದಿನಿ ಪ್ರಸಿದ್ಧ ಉತ್ಪನ್ನಗಳಾದ ಹಾಲು, ಮೊಸರು, ಮಜ್ಜಿಗೆ, ಲಸ್ಸಿ, ಮೈಸೂರಪಾಕ್, ಐಸ್ ಕ್ರೀಮ್ ಮೊದಲಾದವು ಲಭ್ಯವಿದ್ದು ಶ್ರೀ ಕ್ಷೇತ್ರ ಕ್ಕೆ ಬರುವ ಭಕ್ತಾದಿಗಳ ಮನ ತಣಿಸಲಿವೆ.

Related posts

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ

Suddi Udaya

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಎ.10-17: ಶ್ರೀರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹ: ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

Suddi Udaya

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆ

Suddi Udaya
error: Content is protected !!