September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

ಕೊಕ್ಕಡ: ಪ್ರಸಿದ್ಧ ಶ್ರದ್ಧಾ ಕೇಂದ್ರ , ಯಾತ್ರಾ ಸ್ಥಳವಾದ ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಯು ಶುಭಾರಂಭಗೊಂಡಿತು.

ಬೆಳ್ತಂಗಡಿ ಯಲ್ ಐ ಸಿ ಅಭಿವೃದ್ಧಿ ಅಧಿಕಾರಿ ಉದಯ ಶಂಕರ್ ಕೆ ದೀಪ ಬೆಳಗಿಸಿ ಶುಭ ಹಾರೈಸಿದರು.

ಅರಸಿನಮಕ್ಕಿ ಗ್ರಾ ಪಂ ಉಪಾಧ್ಯಕ್ಷ ಸುಧೀರ್ ಕುಮಾರ್, ಗಣೇಶ್ ಕೆ ಹೊಸ್ತೋಟ, ಧರ್ಮಸ್ಥಳ ಬಿ ಜೆ ಪಿ ಶಕ್ತಿ ಕೇಂದ್ರದ ಕಾರ್ಯದರ್ಶಿ ಕರುಣಾಕರ ಶಿಶಿಲ, ನಿವೃತ್ತ ಯೋಧ ಸುಭೇದಾರ್ ಮೇಜರ್ ಮಹಾಬಲ,ಗ್ರಾ ಪಂ ಸದಸ್ಯ ಪ್ರೇಮಚಂದ್ರ , ಸುಂದರ ರಾಣ್ಯ, ಕೃಷ್ಣಪ್ಪ ಗೌಡ ಪಡ್ಡಯಿಬೆಟ್ಟು ಹಾಗೂ ಮನೆಯವರು, ಹತ್ಯಡ್ಕ ಸಿ ಎ ಬ್ಯಾಂಕ್ ನಿರ್ದೇಶಕ ಮುರಳಿ ಶೆಟ್ಟಿಗಾರ್, ಶಿಶಿಲ ಗ್ರಾ ಪಂ ಅಧ್ಯಕ್ಷ ಸುಧೀನ್, ಹಿತೈಷಿಗಳು ಉಪಸ್ಥಿತರಿದ್ದರು.

ಮಳಿಗೆಯ ಮಾಲಕ ಸುದರ್ಶನ ಗೌಡ ಎಲ್ಲರನ್ನು ಸ್ವಾಗತಿಸಿ ಉದ್ಯಮಕ್ಕೆ ಎಲ್ಲರ ಬೆಂಬಲ ಕೋರಿದರು.

ಮಳಿಗೆಯಲ್ಲಿ ಕೆಎಂಎಫ್ ನಂದಿನಿ ಪ್ರಸಿದ್ಧ ಉತ್ಪನ್ನಗಳಾದ ಹಾಲು, ಮೊಸರು, ಮಜ್ಜಿಗೆ, ಲಸ್ಸಿ, ಮೈಸೂರಪಾಕ್, ಐಸ್ ಕ್ರೀಮ್ ಮೊದಲಾದವು ಲಭ್ಯವಿದ್ದು ಶ್ರೀ ಕ್ಷೇತ್ರ ಕ್ಕೆ ಬರುವ ಭಕ್ತಾದಿಗಳ ಮನ ತಣಿಸಲಿವೆ.

Related posts

2023-24ನೇ ಸಾಲಿನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Suddi Udaya

ಪುಂಜಾಲಕಟ್ಟೆ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ ಜೀವಾವಧಿ ಶಿಕ್ಷೆ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಕನ್ಯಾಕುಮಾರಿ ಯುವತಿ ಮಂಡಲದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya

ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟ : ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಗೆ ಪ್ರಶಸ್ತಿ

Suddi Udaya

ಲಾಯಿಲದಲ್ಲಿ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ಕಾಳಿಕಾಂಬಾ, ವರಮಹಾಲಕ್ಷ್ಮೀ ಪೂಜೆ: ಬೆಸ್ಟ್ ಎಂಎಲ್ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
error: Content is protected !!