23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

ಕೊಕ್ಕಡ: ಪ್ರಸಿದ್ಧ ಶ್ರದ್ಧಾ ಕೇಂದ್ರ , ಯಾತ್ರಾ ಸ್ಥಳವಾದ ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಯು ಶುಭಾರಂಭಗೊಂಡಿತು.

ಬೆಳ್ತಂಗಡಿ ಯಲ್ ಐ ಸಿ ಅಭಿವೃದ್ಧಿ ಅಧಿಕಾರಿ ಉದಯ ಶಂಕರ್ ಕೆ ದೀಪ ಬೆಳಗಿಸಿ ಶುಭ ಹಾರೈಸಿದರು.

ಅರಸಿನಮಕ್ಕಿ ಗ್ರಾ ಪಂ ಉಪಾಧ್ಯಕ್ಷ ಸುಧೀರ್ ಕುಮಾರ್, ಗಣೇಶ್ ಕೆ ಹೊಸ್ತೋಟ, ಧರ್ಮಸ್ಥಳ ಬಿ ಜೆ ಪಿ ಶಕ್ತಿ ಕೇಂದ್ರದ ಕಾರ್ಯದರ್ಶಿ ಕರುಣಾಕರ ಶಿಶಿಲ, ನಿವೃತ್ತ ಯೋಧ ಸುಭೇದಾರ್ ಮೇಜರ್ ಮಹಾಬಲ,ಗ್ರಾ ಪಂ ಸದಸ್ಯ ಪ್ರೇಮಚಂದ್ರ , ಸುಂದರ ರಾಣ್ಯ, ಕೃಷ್ಣಪ್ಪ ಗೌಡ ಪಡ್ಡಯಿಬೆಟ್ಟು ಹಾಗೂ ಮನೆಯವರು, ಹತ್ಯಡ್ಕ ಸಿ ಎ ಬ್ಯಾಂಕ್ ನಿರ್ದೇಶಕ ಮುರಳಿ ಶೆಟ್ಟಿಗಾರ್, ಶಿಶಿಲ ಗ್ರಾ ಪಂ ಅಧ್ಯಕ್ಷ ಸುಧೀನ್, ಹಿತೈಷಿಗಳು ಉಪಸ್ಥಿತರಿದ್ದರು.

ಮಳಿಗೆಯ ಮಾಲಕ ಸುದರ್ಶನ ಗೌಡ ಎಲ್ಲರನ್ನು ಸ್ವಾಗತಿಸಿ ಉದ್ಯಮಕ್ಕೆ ಎಲ್ಲರ ಬೆಂಬಲ ಕೋರಿದರು.

ಮಳಿಗೆಯಲ್ಲಿ ಕೆಎಂಎಫ್ ನಂದಿನಿ ಪ್ರಸಿದ್ಧ ಉತ್ಪನ್ನಗಳಾದ ಹಾಲು, ಮೊಸರು, ಮಜ್ಜಿಗೆ, ಲಸ್ಸಿ, ಮೈಸೂರಪಾಕ್, ಐಸ್ ಕ್ರೀಮ್ ಮೊದಲಾದವು ಲಭ್ಯವಿದ್ದು ಶ್ರೀ ಕ್ಷೇತ್ರ ಕ್ಕೆ ಬರುವ ಭಕ್ತಾದಿಗಳ ಮನ ತಣಿಸಲಿವೆ.

Related posts

ತೆಂಕಕಾರಂದೂರು ಸಂತಾನ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ತೋಟತ್ತಾಡಿ: ಬೈಲಂಗಡಿ ಅರಮನೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಕೊಕ್ಕಡ: ತಿಪ್ಪಮಾಜಲ್ ಮೇರಿ ವರ್ಗಿಸ್ ರವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya

ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya
error: Content is protected !!