23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

ಬೆಳ್ತಂಗಡಿ:ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.

ರಾಣಿಬೆನ್ನೂರು ತಾಲೂಕು ಹಾವೇರಿಯ ಮನೋಜ್ ಕುಮಾರ್ ಮತ್ತು ಮನೆಯವರು ಬೆಳ್ತಂಗಡಿ ಕಡೆಯಿಂದ ಕೊಟ್ಟಿಗೆಹಾರದ ಕಡೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಮರಕ್ಕೆ ಡಿಕ್ಕಿಯಾಗಿದ್ದು ಚಾಲಕ ಶ್ರೀಧರ ಸಣ್ಣ ನಿಂಗನವರ್ ಗಂಭೀರ ಗಾಯಗೊಂಡು ಉಜಿರೆಯ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ಮನೋಜ್ ಕುಮಾರ್ ಅವರ ತಾಯಿ ರೆಜಿನಾ ಗ್ಲೋರಿ ಹಾಗೂ ತಂಗಿ ಪ್ರಾರ್ಥನಾ ಗಾಯಗೊಂಡಿದ್ದು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ರಸ್ತೆಯಲ್ಲೇ ಹರಿದ ಮಳೆ ನೀರು: ಶಾಸಕ ಹರೀಶ್ ಪೂಂಜರಿಂದ ತುರ್ತು ಸ್ಪಂದನೆ , ಚರಂಡಿ ದುರಸ್ತಿ

Suddi Udaya

ಗಡಿ ಪಾರು ಮಾಡಿ ಎನ್ನಲು ರಕ್ಷಿತ್ ಶಿವರಾಂ ಯಾರು..? ಕುಂಬಳಕಾಯಿ ಕಳ್ಳ ಎಂದಾಗ ಹೆಗಲು ಮುಟ್ಟಿ ಅರಚಾಡಿದರೆ ನಾವೇನು ಮಾಡಲು ಸಾಧ್ಯ:ತಾ.ಪಂ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳ ಹಸ್ತಾಂತರ

Suddi Udaya

ನಾರಾವಿ-ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಸಚಿವ ಗುಂಡೂರಾವ್ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya
error: Content is protected !!