July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

ಬೆಳ್ತಂಗಡಿ:ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.

ರಾಣಿಬೆನ್ನೂರು ತಾಲೂಕು ಹಾವೇರಿಯ ಮನೋಜ್ ಕುಮಾರ್ ಮತ್ತು ಮನೆಯವರು ಬೆಳ್ತಂಗಡಿ ಕಡೆಯಿಂದ ಕೊಟ್ಟಿಗೆಹಾರದ ಕಡೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಮರಕ್ಕೆ ಡಿಕ್ಕಿಯಾಗಿದ್ದು ಚಾಲಕ ಶ್ರೀಧರ ಸಣ್ಣ ನಿಂಗನವರ್ ಗಂಭೀರ ಗಾಯಗೊಂಡು ಉಜಿರೆಯ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ಮನೋಜ್ ಕುಮಾರ್ ಅವರ ತಾಯಿ ರೆಜಿನಾ ಗ್ಲೋರಿ ಹಾಗೂ ತಂಗಿ ಪ್ರಾರ್ಥನಾ ಗಾಯಗೊಂಡಿದ್ದು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಕಳೆದ 25 ವರ್ಷಗಳಿಂದ ಸಹಕಾರಿ ರಂಗದಲ್ಲಿ ಅಗ್ರಮಾಣ್ಯ ಸೇವೆ ಸಲ್ಲಿಸುತ್ತಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ, ಬೆಂಗಳೂರಿನಲ್ಲಿ ನ. 14 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಕಾಶಿಪಟ್ಣ ದಾರುನ್ನೂರು ಎಜುಕೇಶನ್ ಸೆಂಟರ್‌ಗೆ ರೂ.1 ಕೋಟಿ ಅನುದಾನ ಮಂಜೂರು

Suddi Udaya

ಬೆಳ್ತಂಗಡಿ : ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ನೇಮಕ

Suddi Udaya

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

Suddi Udaya
error: Content is protected !!