25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

ಬಳಂಜ: ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭವು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು‌ ಸಮುದಾಯ ಭವನದಲ್ಲಿ ನಡೆಯಿತು.

ಸಭೆಯಲ್ಲಿ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಹೆಚ್. ಧರ್ಣಪ್ಪ ಪೂಜಾರಿ,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ,ಗ್ರಾಮ ‌ಸಮಿತಿಗಳ ಅಧ್ಯಕ್ಷರುಗಳಾದ ವಾಸು ಪೂಜಾರಿ,ಜೆರೋಮ್ ಲೋಬೊ,ಶಂಶುದ್ದೀನ್ ಕಟ್ಟೆ,ವಿಜೇತ ಅಭ್ಯರ್ಥಿಗಳಾದ ದಿನೇಶ್ ಪಿಕೆ, ದೇಜಪ್ಪ ಪೂಜಾರಿ,ದೇವಿಪ್ರಸಾದ್ ಶೆಟ್ಟಿ,ಸ್ಪರ್ದಿಸಿದ ಅಭ್ಯರ್ಥಿಗಳಾದ ರಮೇಶ್,ವಿಕ್ಟರ್ ಕ್ರಾಸ್ತಾ,ಸತೀಶ್ ದೇವಾಡಿಗ, ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ಅಮೀನ್, ಪ್ರಮುಖರಾದ ಪಿಕೆ ಚಂದ್ರಶೇಖರ್, ಪದ್ಮನಾಭ ಸಾಲ್ಯಾನ್, ಸದಾನಂದ ಸಾಲ್ಯಾನ್,ಮತ್ತಿತರ ಪ್ರಮುಖರು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಅಭಿನಂದನಾ ಸಮಾರಂಭ ಜೊತೆಗೆ ಫೆಬ್ರವರಿ 17ರಂದು ಜರುಗುವ ಕಾಂಗ್ರೆಸ್ ಸಮಾವೇಶದ ರೂಪುರೇಷೆಯ‌ ಕುರಿತು ಸಮಾಲೋಚಿಸಲಾಯಿತು.

ಯುವ ಕಾಂಗ್ರೆಸ್ ಜಿಲ್ಲಾ ವಕ್ತಾರ ಸಂದೀಪ್ ಎಸ್ ನೀರಲ್ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ನಾಳೆ( ಜೂ.24): ವಿದ್ಯುತ್ ನಿಲುಗಡೆ

Suddi Udaya

ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

Suddi Udaya

ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಒಕ್ಕೂಟಗಳ ಪದಗ್ರಹಣ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya
error: Content is protected !!