September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

ಕುವೆಟ್ಟು: ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗೆ ರಸ್ತೆ ಅಗಲೀಕರಣ ಹೆದ್ದಾರಿಯ ಕೆಲಸ ನಡೆಯುತ್ತಿದ್ದು ಮದ್ದಡ್ಕ ಪೇಟೆಯಲ್ಲಿ ಚರಂಡಿಯ ಕೆಲಸವನ್ನು ಸಂಪೂರ್ಣಗೊಳಿಸದೆ ಕಳೆದ ಒಂದು ತಿಂಗಳ ಹಿಂದೆ ಸ್ತಗಿತಗೊಳಿಸಿದ್ದು ಪೇಟೆಯ ವರ್ತಕರಿಗೆ, ಬ್ಯಾಂಕ್, ಹೋಟೆಲ್ ಇನ್ನಿತರ ವ್ಯಾಪರಸ್ಥರಿಗೆ ಗ್ರಾಹಕರಿಗೆ ಪೇಟೆಯ ಜನತೆಗೆ ಬಹಳ ತೊಂದರೆಯನ್ನು ಅನುಭವಿಸುತ್ತಿದ್ದು ತಕ್ಷಣ ಕಾಮಗಾರಿಯನ್ನು ಪ್ರಾರಂಭ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕ ಮಾಡಿ ತಿಳಿಸಬೇಕು ಎಂದು ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಹಾಗೂ ಪಂಚಾಯತ್ ಅಭಿವೃದ್ದಿ ಅಧಿಕಾರಿ ಗೀತಾರವರಿಗೆ ಮನವಿ ನೀಡುವ ಮೂಲಕ ಫೆ 12 ರಂದು ಒತ್ತಾಯಿಸಲಾಯಿತು.

ತಕ್ಷಣ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿ ಮಾಹಿತಿ ಪಡೆದುಕೊಂಡು 3 ದಿನಗಳಲ್ಲಿ ಮದ್ದಡ್ಕ ಪೇಟೆಯ‌ ಎಲ್ಲಾ ವ್ಯಾಪರಸ್ತರ ಸಭೆಯನ್ನು ಕರೆದು ತೊಂದರೆಯನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಮಾಜ ಸೇವಕ ಅಬ್ಬೋನ್ ಮದ್ದಡ್ಕ. ಶ್ರೀ ದುರ್ಗಾ ಟ್ರೇಡರ್ಸ್ ನ ಮಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಶೇಖರ್ ಶೆಟ್ಟಿ ಹೋಟೆಲ್ ದತ್ತಗುರು ಮದ್ದಡ್ಕ ವರ್ತಕರ ಸಂಘದ ಸದಸ್ಯರಾದ ವೈ ಕೆ ಸ್ಟೋರ್ ಇದರ ಮಾಲಕ ಯಾಕುಬ್ ಮತ್ತು ಉಮೇಶ್ ಕುಮಾರ್ ಮನು ಸ್ಟುಡಿಯೋ ಮದ್ದಡ್ಕ ಉಪಸ್ಥಿತರಿದ್ದರು.

Related posts

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

Suddi Udaya

ಪಾಲೇದು: ಅಗರಿ ರಾಜಮ್ಮ ನಾಯ್ಕ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ‘ಉತ್ತಮ ಆಹಾರ ಅಭ್ಯಾಸ ಮತ್ತು ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮಾಹಿತಿ ಕಾರ್ಯಕ್ರಮ

Suddi Udaya

ಅಳದಂಗಡಿ ಸರಸ್ವತಿ ಭಟ್ ಹೃದಯಾಘಾತದಿಂದ ನಿಧನ

Suddi Udaya

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

Suddi Udaya

ಕಡಿರುದ್ಯಾವರ: ಕಾನರ್ಪ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya
error: Content is protected !!