July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ) ತೋಟತ್ತಾಡಿ, ಚಿಬಿದ್ರೆ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಇವುಗಳ ಜಂಟಿ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಗುರುಪೂಜೆಯು ಫೆ.11 ರಂದು ಸಂಘದ ವಠಾರದಲ್ಲಿ ನಡೆಯಿತು.

ವೈದಿಕ ವಿಧಿ ವಿಧಾನಗಳನ್ನು ಕಂಕನಾಡಿ ಗರಡಿಯ ಅರ್ಚಕರಾದ ಹರೀಶ್ ಶಾಂತಿ ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಶೇಖರ್ ಪೂಜಾರಿ ಕಳೆಂಜೊಟ್ಟು ಅಧ್ಯಕ್ಷತೆ ವಹಿಸಿದರು.

ವೇದಿಕೆಯಲ್ಲಿ ಸಂಘದ ಗೌರವ ಅಧ್ಯಕ್ಷ ತಿಮ್ಮಪ್ಪ ಪೂಜಾರಿ ಹಾರಗಂಡಿ, ಕಾರ್ಯದರ್ಶಿ ಜಯನಂದ ಪೂಜಾರಿ ಡಿ ಮಜಲು, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾದ ಉಷಾ ರಾಮಾನಂದ ಪೂಜಾರಿ ಡಿ ಮಜಲು, ಹಿರಿಯ ಸದಸ್ಯ ಹೊನ್ನಪ್ಪ ಪೂಜಾರಿ ಉಜಿರೆ ಉಪಸ್ಥಿತರಿದ್ದರು.

ಈ ಸಂದರ್ಭ ಕಳೆದ ಬಾರಿಯ ಎಸ್.ಎಸ್.ಎಲ್.ಸಿ ಮತ್ತು ಪಿ ಯು ಸಿ ಯಲ್ಲಿ 80% ಮೇಲ್ಪಟ್ಟು ಅಂಕಗಳಿಸಿದ 6 ವಿದ್ಯಾರ್ಥಿಗಳನ್ನು ಮತ್ತು ವೈದಿಕ ವಿಧಿ ವಿಧಾನಗಳನ್ನು ನೆರವೇರಿಸಿದ ಹರೀಶ್ ಶಾಂತಿಯನ್ನು ಗೌರವಿಸಲಾಯಿತು.

ಗೌರವ ಸಲಹೆಗಾರರಾದ ಸನತ್ ಕುಮಾರ್ ಮೂರ್ಜೆ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿ, ಕುಮಾರಿ ಮೋಕ್ಷ ಕಜೆ ಪ್ರಾರ್ಥನೆ ಮಾಡಿದರು. ಗುರುದೇವ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಕಾರ್ಯಕ್ರಮ ನಿರೂಪಿಸಿದರು. ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ ) ಬೆಳ್ತಂಗಡಿ ಇದರ ಅಧ್ಯಕ್ಷ ಜಯ ವಿಕ್ರಮ ಕಲ್ಲಾಪು ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್, ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಬೆಳ್ಳಿ ಹಬ್ಬ ಆಚರಣಾ ಸಮಿತಿಯ ಬೆಳ್ತಂಗಡಿಯ ಸಂಚಾಲಕಿ ಶಾಂತ ಬಂಗೇರ ಕುವೆಟ್ಟು ಸಂಘಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

Related posts

ಪಟ್ರಮೆ ಬಸ್ ನಿಲ್ದಾಣದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಛೇರಿ ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಕಟ್ಟಡಕ್ಕೆ ಸ್ಥಳಾಂತರ

Suddi Udaya

140 ವರ್ಷಗಳ ಇತಿಹಾಸವಿರುವ ಗೇರುಕಟ್ಟೆ ಕೊರಂಜ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ನ ವತಿಯಿಂದ “ವೈದ್ಯರೊಂದಿಗೆ ಸಂವಾದ” ಕಾರ್ಯಕ್ರಮ

Suddi Udaya
error: Content is protected !!