April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ

ಕಳಿಯ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಬೆಳ್ಳಿ ಹಬ್ಬದ ಅಂಗವಾಗಿ ಮಾ.10 ರಂದು ಮುಲ್ಕಿಯ ಭವಾನಿ ಶಂಕರ ಮೈದಾನದಲ್ಲಿ ಜರಗುವ ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶದ ತಯಾರಿ ಬಗ್ಗೆ ಪೂರ್ವಭಾವಿ ಸಭೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆಯಿತು.

ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮತ್ತು ಗ್ರಾಮ ಸಮಿತಿಯ ಅಧ್ಯಕ್ಷ ದಿವಾಕರ ಮೇದಿನ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಬೆಳ್ತಂಗಡಿ ತಾಲೂಕು ಸಂಘದ ಮಾಜಿ ಅಧ್ಯಕ್ಷರು ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಅಧ್ಯಕ್ಷ ಪಿತಾಂಬರ ಹೆರಾಜೆ, ಮಾತನಾಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಜಾತ್ರೋತ್ಸವದಲ್ಲಿ ಮತ್ತು ಮಾರ್ಚ್ 10 ರಂದು ನಡೆಯುವ ಬಿಲ್ಲವರ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆ ಮೂಲಕ ಸಂಘಟನೆ ಶಕ್ತಿಯನ್ನು ಪ್ರದರ್ಶಿಸಬೇಕೆಂದು ಕರೆ ನೀಡಿದರು.

ಗುರುನಾರಾಯಣಸ್ವಾಮಿ ಸೇವಾ ಸಂಘದ ಮಾಜಿ ಉಪಾಧ್ಯಕ್ಷ , ಶೇಖರ ಬಂಗೇರ, ಕಾರ್ಯಕಾರಿ ಸಮಿತಿ ಸದಸ್ಯೆ ಶ್ರೀಮತಿ ವಿನೋಧಿನಿ ರಾಮಪ್ಪ, ಸುರೇಶ ಬಂಗೇರ ಮೆದಿನಾ, ಶ್ರೀಮತಿ ಶ್ವೇತಾ, ಶ್ರೀಮತಿ ಭಾಗ್ಯ, ಶ್ರೀಮತಿ ಪ್ರಮೀಳಾ, ಶ್ರೀಮತಿ ಶಶಿಕಲಾ, ಶ್ರೀಮತಿ ಪೂರ್ಣಿಮಾ, ಶ್ರೀಮತಿ ಮೋಹಿನಿ, ಶ್ರೀಮತಿ ವಸಂತಿ, ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು., ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಬೆಳ್ತಂಗಡಿ ತಾಲೂಕಿನ ಸಂಚಾಲಕಿ , ಶ್ರೀಮತಿ ಶಾಂತ ಬಂಗೇರ ರವರು ಪ್ರಸ್ತಾವಿಸಿ ಮಾ.10 ರಂದು ಮೂಲ್ಕಿಯಲ್ಲಿ ನಡೆಯುವ ಐತಿಹಾಸಿಕ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಭಾಗವಹಿಸಲು ಕರೆ ನೀಡಿದರು.


ಕಳಿಯ ಮಹಿಳಾ ವೇದಿಕೆ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಮಧ್ವರಾಜ್ ಸ್ವಾಗತಿಸಿದರು. ಶ್ರೀಮತಿ ಕುಸುಮಾವತಿ ಬಂಗೇರ ಧನ್ಯವಾದ ಸಮರ್ಪಿಸಿದರು.

Related posts

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

Suddi Udaya

ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ ನಿಧನ

Suddi Udaya

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya
error: Content is protected !!