March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ

ಬೆಳ್ತಂಗಡಿ :ಸೀರೋ ಮಲಬಾರ್ , ಮಲಂಕರ ಸಭೆ ಸೇರಿದಂತೆ ವಿವಿದ ಧರ್ಮ ಸಭೆಯ ಚರ್ಚ್ ಗಳಲ್ಲಿ ಲೋಕ ರಕ್ಷಕ, ಮಹಾನ್ ಮಾನವತಾವಾದಿ, ಸಹನೆ, ತ್ಯಾಗ ಮತ್ತು ಪ್ರೀತಿಯ ಮೂಲಕ ಲೋಕವನ್ನು ಗೆದ್ದ ಯೇಸು ಕ್ರಿಸ್ತರ ಯಾತನೆಯನ್ನು ನೆನಪಿಸುವ ಪಾಸ್ಕ ಕಾಲಕ್ಕೆ ಕ್ರೈಸ್ತರು ವಿವಿದ ಚರ್ಚ್ ಗಳಿಗೆ ಇಂದು ಮುಂಜಾನೆ ತೆರಳಿ ಪೂಜಾರ್ಪಣೆ ಯಲ್ಲಿ ಭಾಗವಹಿಸಿ ಹಣೆಗೆ ಆಶೀರ್ವದಿಸಿದ ವಿಭೂತಿಯನ್ನು ಧರ್ಮ ಗುರುಗಳಿಂದ ಹಚ್ಚಿ ವ್ರತಾನುಷ್ಟಾನಕ್ಕೆ ಪ್ರವೇಶ ಪಡೆದರು.

ಇಂದಿನಿಂದ ಸಾಮಾನ್ಯವಾಗಿ ಕ್ರೈಸ್ತರು ಮಾಂಸ ಆಹಾರವನ್ನು ತ್ಯಜಿಸಿ ಸಂಪೂರ್ಣ ಶಾಖಾಹಾರಿಗಳಾಗಿ ಬದಲಾಗುತ್ತಾರೆ. ಪ್ರತಿ ದಿನ ಪೂಜೆಯಲ್ಲಿ ಭಾಗವಹಿಸಿ ಶಿಲುಬೆಯ ಹಾದಿಯ ಪ್ರಾರ್ಥನೆ ಯನ್ನು, ಮನೆಗಳಲ್ಲಿ ಚರ್ಚ್ ಗಳಲ್ಲಿ ಮಾಡುವುದು ಈ ಸಂದರ್ಭದ ವಿಶೇಷ, ಮಾಡಿದ ತಪ್ಪುಗಳಿಗೆ ಪರಿಹಾರ ಮತ್ತು ಪಾಪ ವಿಮುಕ್ತಿ ಪಡೆಯುವುದು ಈ ವ್ರತಾಚರಣೆಯ ದಿನಗಳ ವಿಶೇಷತೆಯಾಗಿದೆ. ಇಂದಿನಿಂದ ಈಸ್ಟರ್ ವರೆಗಿನ ಐವತ್ತು ದಿನಗಳ ವರೆಗೆ ಈ ವ್ರತಚಾರಣೆ ನಡೆಯಲಿದೆ. ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮ ಗುರುಗಳಾದ ವಂದನಿಯ ಫಾ.ಶಾಜಿ ಮಾತ್ಯು, ಫಾ. ಆಶೀಲ್ ನೇತೃತ್ವ ವಹಿಸಿದರು.

Related posts

ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇತುಬಂಧ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya

ಸಿ.ಎ ಪರೀಕ್ಷೆ: ಕತ್ತೋಡಿ ನಿವಾಸಿ ಅಕ್ಷಯ್ ಜೈನ್ ಉತ್ತೀರ್ಣ

Suddi Udaya

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya

ಗೇರುಕಟ್ಟೆ: ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

Suddi Udaya
error: Content is protected !!