September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ

ಬೆಳ್ತಂಗಡಿ :ಸೀರೋ ಮಲಬಾರ್ , ಮಲಂಕರ ಸಭೆ ಸೇರಿದಂತೆ ವಿವಿದ ಧರ್ಮ ಸಭೆಯ ಚರ್ಚ್ ಗಳಲ್ಲಿ ಲೋಕ ರಕ್ಷಕ, ಮಹಾನ್ ಮಾನವತಾವಾದಿ, ಸಹನೆ, ತ್ಯಾಗ ಮತ್ತು ಪ್ರೀತಿಯ ಮೂಲಕ ಲೋಕವನ್ನು ಗೆದ್ದ ಯೇಸು ಕ್ರಿಸ್ತರ ಯಾತನೆಯನ್ನು ನೆನಪಿಸುವ ಪಾಸ್ಕ ಕಾಲಕ್ಕೆ ಕ್ರೈಸ್ತರು ವಿವಿದ ಚರ್ಚ್ ಗಳಿಗೆ ಇಂದು ಮುಂಜಾನೆ ತೆರಳಿ ಪೂಜಾರ್ಪಣೆ ಯಲ್ಲಿ ಭಾಗವಹಿಸಿ ಹಣೆಗೆ ಆಶೀರ್ವದಿಸಿದ ವಿಭೂತಿಯನ್ನು ಧರ್ಮ ಗುರುಗಳಿಂದ ಹಚ್ಚಿ ವ್ರತಾನುಷ್ಟಾನಕ್ಕೆ ಪ್ರವೇಶ ಪಡೆದರು.

ಇಂದಿನಿಂದ ಸಾಮಾನ್ಯವಾಗಿ ಕ್ರೈಸ್ತರು ಮಾಂಸ ಆಹಾರವನ್ನು ತ್ಯಜಿಸಿ ಸಂಪೂರ್ಣ ಶಾಖಾಹಾರಿಗಳಾಗಿ ಬದಲಾಗುತ್ತಾರೆ. ಪ್ರತಿ ದಿನ ಪೂಜೆಯಲ್ಲಿ ಭಾಗವಹಿಸಿ ಶಿಲುಬೆಯ ಹಾದಿಯ ಪ್ರಾರ್ಥನೆ ಯನ್ನು, ಮನೆಗಳಲ್ಲಿ ಚರ್ಚ್ ಗಳಲ್ಲಿ ಮಾಡುವುದು ಈ ಸಂದರ್ಭದ ವಿಶೇಷ, ಮಾಡಿದ ತಪ್ಪುಗಳಿಗೆ ಪರಿಹಾರ ಮತ್ತು ಪಾಪ ವಿಮುಕ್ತಿ ಪಡೆಯುವುದು ಈ ವ್ರತಾಚರಣೆಯ ದಿನಗಳ ವಿಶೇಷತೆಯಾಗಿದೆ. ಇಂದಿನಿಂದ ಈಸ್ಟರ್ ವರೆಗಿನ ಐವತ್ತು ದಿನಗಳ ವರೆಗೆ ಈ ವ್ರತಚಾರಣೆ ನಡೆಯಲಿದೆ. ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮ ಗುರುಗಳಾದ ವಂದನಿಯ ಫಾ.ಶಾಜಿ ಮಾತ್ಯು, ಫಾ. ಆಶೀಲ್ ನೇತೃತ್ವ ವಹಿಸಿದರು.

Related posts

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya

ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ

Suddi Udaya

ಅಳದಂಗಡಿ: ಆಟೋ ಪಲ್ಟಿಯಾಗಿ ಚಾಲಕ ಸಾವು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya
error: Content is protected !!