38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

ಕುವೆಟ್ಟು: ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗೆ ರಸ್ತೆ ಅಗಲೀಕರಣ ಹೆದ್ದಾರಿಯ ಕೆಲಸ ನಡೆಯುತ್ತಿದ್ದು ಮದ್ದಡ್ಕ ಪೇಟೆಯಲ್ಲಿ ಚರಂಡಿಯ ಕೆಲಸವನ್ನು ಸಂಪೂರ್ಣಗೊಳಿಸದೆ ಕಳೆದ ಒಂದು ತಿಂಗಳ ಹಿಂದೆ ಸ್ತಗಿತಗೊಳಿಸಿದ್ದು ಪೇಟೆಯ ವರ್ತಕರಿಗೆ, ಬ್ಯಾಂಕ್, ಹೋಟೆಲ್ ಇನ್ನಿತರ ವ್ಯಾಪರಸ್ಥರಿಗೆ ಗ್ರಾಹಕರಿಗೆ ಪೇಟೆಯ ಜನತೆಗೆ ಬಹಳ ತೊಂದರೆಯನ್ನು ಅನುಭವಿಸುತ್ತಿದ್ದು ತಕ್ಷಣ ಕಾಮಗಾರಿಯನ್ನು ಪ್ರಾರಂಭ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕ ಮಾಡಿ ತಿಳಿಸಬೇಕು ಎಂದು ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಹಾಗೂ ಪಂಚಾಯತ್ ಅಭಿವೃದ್ದಿ ಅಧಿಕಾರಿ ಗೀತಾರವರಿಗೆ ಮನವಿ ನೀಡುವ ಮೂಲಕ ಫೆ 12 ರಂದು ಒತ್ತಾಯಿಸಲಾಯಿತು.

ತಕ್ಷಣ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿ ಮಾಹಿತಿ ಪಡೆದುಕೊಂಡು 3 ದಿನಗಳಲ್ಲಿ ಮದ್ದಡ್ಕ ಪೇಟೆಯ‌ ಎಲ್ಲಾ ವ್ಯಾಪರಸ್ತರ ಸಭೆಯನ್ನು ಕರೆದು ತೊಂದರೆಯನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಮಾಜ ಸೇವಕ ಅಬ್ಬೋನ್ ಮದ್ದಡ್ಕ. ಶ್ರೀ ದುರ್ಗಾ ಟ್ರೇಡರ್ಸ್ ನ ಮಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಶೇಖರ್ ಶೆಟ್ಟಿ ಹೋಟೆಲ್ ದತ್ತಗುರು ಮದ್ದಡ್ಕ ವರ್ತಕರ ಸಂಘದ ಸದಸ್ಯರಾದ ವೈ ಕೆ ಸ್ಟೋರ್ ಇದರ ಮಾಲಕ ಯಾಕುಬ್ ಮತ್ತು ಉಮೇಶ್ ಕುಮಾರ್ ಮನು ಸ್ಟುಡಿಯೋ ಮದ್ದಡ್ಕ ಉಪಸ್ಥಿತರಿದ್ದರು.

Related posts

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ

Suddi Udaya

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya
error: Content is protected !!